ತಾಲ್ಲೂಕು ಪಂಚಾಯ್ತಿ ಆಡಳಿತಾಧಿಕಾರಿಯೂ ಆಗಿರುವ ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಬಿ.ಪಿ.ಸತೀಶ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಮಾಸಿಕ ಪ್ರಗತಿ ಪರಿಶಿಲನಾ ಸಭೆಯಲ್ಲಿ ಮಾತನಾಡಿದ ಅವರು, ‘ಮಣ್ಣು ಮಿಶ್ರಣ ಮಾಡಿರುವ ಗೊಬ್ಬರ ಮಾರಾಟ ನಡೆಸಿದ ಬಗ್ಗೆ ದೂರುಗಳಿದ್ದವು. ಈ ಬಗ್ಗೆ ಜನರಿಗೆ ತಿಳಿವಳಿಕೆ ನೀಡಲಾಗುತ್ತಿದೆ. ಪರವಾನಿಗೆ ಹೊಂದಿರುವ ಅಧಿಕೃತ ಮಾರಾಟಗಾರರಿಂದ ಗೊಬ್ಬರ ಖರೀದಿಸಲು ಸೂಚಿಸಲಾಗುತ್ತಿದೆ’ ಎಂದರು.