ಬೆಳಿಗ್ಗೆ 7 ಗಂಟೆಗೆ ನಗರದಿದ ಗೋಕರ್ಣಕ್ಕೆ ತೆರಳುವ ಅವರು 10 ಗಂಟೆಗೆ ಶಿರಸಿಗೆ ತೆರಳಲಿದ್ದಾರೆ. ಅಲ್ಲಿ 11.15ಕ್ಕೆ ಪಂಡಿತ ಸಾರ್ವಜನಿಕ ಆಸ್ಪತ್ರೆಯಲ್ಲಿ 45 ರಿಂದ 95 ವಯೋಮಾನದವರಿಗೆ ಹಾಗೂ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಕೋವಿಡ್-19 ಲಸಿಕೆ ನೀಡುವ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12.30 ಕ್ಕೆ ಶಿರಸಿ ತಾಲ್ಲೂಕಿನ ಸೋಂದಾ ಸ್ವರ್ಣವಲ್ಲಿ ಮಠದಲ್ಲಿ ನೂತನವಾಗಿ ನಿರ್ಮಿಸಿರುವ ಬಹುಪಯೋಗಿ ವಿದ್ಯಾಭವನ ಕಟ್ಟಡ ಲೋಕಾರ್ಪಣೆ ಹಾಗೂ ತ್ರಿದಶಮಾನೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಕೆ. ನಾಗೇಂದ್ರ ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.