<figcaption>""</figcaption>.<p><strong>ಶಿರಸಿ:</strong> ಮಳೆಯ ಜೊತೆಗೆ ಬೀಸುತ್ತಿರುವ ಭೀಕರ ಗಾಳಿ ಜನರನ್ನು ಕಂಗಾಲು ಮಾಡಿದೆ. ಶಿರಸಿ- ಸಿದ್ದಾಪುರ ತಾಲ್ಲೂಕುಗಳಲ್ಲಿ ಮಂಗಳವಾರದಿಂದ ಧಾರಾಕಾರ ಮಳೆಯಾಗುತ್ತಿದೆ. ಗಾಳಿಯ ಆರ್ಭಟಕ್ಕೆ ಅನೇಕ ಕಡೆಗಳಲ್ಲಿ ಮರಗಳು ಮುರಿದು ಮನೆ, ವಿದ್ಯುತ್ ಕಂಬಗಳಿಗೆ ಧಕ್ಕೆಯಾಗಿದೆ.</p>.<p>ಶಿರಸಿ- ಬನವಾಸಿ ರಸ್ತೆಯಲ್ಲಿ ಬೃಹತ್ ಮರ ಬಿದ್ದು ಸಂಚಾರ ಸ್ಥಗಿತಗೊಂಡಿದೆ. ಗಣೇಶನಗರದಲ್ಲಿ ಮನೆಯೊಂದರ ಮೇಲೆ ಮರ ಬಿದ್ದು, ಮನೆ ಜಖಂಗೊಂಡಿದೆ. ಜಿಲ್ಲೆಯಲ್ಲಿ ಆ.5ರಿಂದ 8ರವರೆಗೆ ಭಾರಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದದ್ದು, ರೆಡ್ ಅಲರ್ಟ್ ಘೋಷಿಸಿದೆ.</p>.<p>ಕಾರವಾರದಲ್ಲಿ ಗಾಳಿಯ ಅಬ್ಬರ ಜೋರಾಗಿದೆ. ಸಮುದ್ರದಲ್ಲಿ ಭಾರಿ ಗಾತ್ರದ ಅಲೆಗಳು ಅಪ್ಪಳಿಸುತ್ತಿವೆ. ಕರಾವಳಿಯಾದ್ಯಂತ ನಿನ್ನೆಯಿಂದಲೂ ವಾತಾವರಣ ಹೀಗೇ ಇದೆ. ಆಗಾಗ ಬಿರುಸಾದ ಮಳೆ ಬೀಳುತ್ತಿದೆ. ದಟ್ಟವಾದ ಮೋಡ ಕವಿದಿದೆ.</p>.<div style="text-align:center"><figcaption><em><strong>ಶಿರಸಿ ತಾಲ್ಲೂಕಿನ ಬನವಾಸಿ ಹೋಬಳಿಯಲ್ಲಿ ಗಾಳಿಯ ಆರ್ಭಟಕ್ಕೆ ಮೆಕ್ಕೆಜೋಳದ ಗಿಡಗಳು ನೆಲಕಚ್ಚಿವೆ</strong></em></figcaption></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಶಿರಸಿ:</strong> ಮಳೆಯ ಜೊತೆಗೆ ಬೀಸುತ್ತಿರುವ ಭೀಕರ ಗಾಳಿ ಜನರನ್ನು ಕಂಗಾಲು ಮಾಡಿದೆ. ಶಿರಸಿ- ಸಿದ್ದಾಪುರ ತಾಲ್ಲೂಕುಗಳಲ್ಲಿ ಮಂಗಳವಾರದಿಂದ ಧಾರಾಕಾರ ಮಳೆಯಾಗುತ್ತಿದೆ. ಗಾಳಿಯ ಆರ್ಭಟಕ್ಕೆ ಅನೇಕ ಕಡೆಗಳಲ್ಲಿ ಮರಗಳು ಮುರಿದು ಮನೆ, ವಿದ್ಯುತ್ ಕಂಬಗಳಿಗೆ ಧಕ್ಕೆಯಾಗಿದೆ.</p>.<p>ಶಿರಸಿ- ಬನವಾಸಿ ರಸ್ತೆಯಲ್ಲಿ ಬೃಹತ್ ಮರ ಬಿದ್ದು ಸಂಚಾರ ಸ್ಥಗಿತಗೊಂಡಿದೆ. ಗಣೇಶನಗರದಲ್ಲಿ ಮನೆಯೊಂದರ ಮೇಲೆ ಮರ ಬಿದ್ದು, ಮನೆ ಜಖಂಗೊಂಡಿದೆ. ಜಿಲ್ಲೆಯಲ್ಲಿ ಆ.5ರಿಂದ 8ರವರೆಗೆ ಭಾರಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದದ್ದು, ರೆಡ್ ಅಲರ್ಟ್ ಘೋಷಿಸಿದೆ.</p>.<p>ಕಾರವಾರದಲ್ಲಿ ಗಾಳಿಯ ಅಬ್ಬರ ಜೋರಾಗಿದೆ. ಸಮುದ್ರದಲ್ಲಿ ಭಾರಿ ಗಾತ್ರದ ಅಲೆಗಳು ಅಪ್ಪಳಿಸುತ್ತಿವೆ. ಕರಾವಳಿಯಾದ್ಯಂತ ನಿನ್ನೆಯಿಂದಲೂ ವಾತಾವರಣ ಹೀಗೇ ಇದೆ. ಆಗಾಗ ಬಿರುಸಾದ ಮಳೆ ಬೀಳುತ್ತಿದೆ. ದಟ್ಟವಾದ ಮೋಡ ಕವಿದಿದೆ.</p>.<div style="text-align:center"><figcaption><em><strong>ಶಿರಸಿ ತಾಲ್ಲೂಕಿನ ಬನವಾಸಿ ಹೋಬಳಿಯಲ್ಲಿ ಗಾಳಿಯ ಆರ್ಭಟಕ್ಕೆ ಮೆಕ್ಕೆಜೋಳದ ಗಿಡಗಳು ನೆಲಕಚ್ಚಿವೆ</strong></em></figcaption></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>