<p><strong>ಶಿರಸಿ:</strong> ತಾಲ್ಲೂಕಿನಲ್ಲಿ ಎರಡು ದಿನಗಳಿಂದ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯಿಂದಾಗಿ ಹಳ್ಳಗಳು ಉಕ್ಕಿ ಹರಿದು ಕೃಷಿ, ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ. ಅಲ್ಲಲ್ಲಿ ಮರ ಮುರಿದು ಬಿದ್ದು ಅನೇಕ ಹಳ್ಳಿಗಳ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.</p>.<p>ನಗರದ ಮಾರಿಕಾಂಬಾ ದೇವಾಲಯದ ಪಕ್ಕದಲ್ಲಿರುವ ಧರ್ಮಛತ್ರದ ಹಳೆಯ ಗೋಡೆಯೊಂದು ಸೋಮವಾರ ಬೆಳಿಗ್ಗೆ ಕುಸಿದು, ನಾಗರಾಜ ಪೂಜಾರಿ ಎಂಬುವರಿಗೆ ಸೇರಿದ ಕಾರು ಜಖಂಗೊಂಡಿದೆ. ಘಟನೆಯಲ್ಲಿ ಸುವರ್ಣಾ ಪೂಜಾರಿ ಎಂಬ ವೃದ್ಧೆಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.</p>.<p>ಕೊಡ್ನಗದ್ದೆ ಪಂಚಾಯ್ತಿ ವ್ಯಾಪ್ತಿಯಲ್ಲಿ ಬಸವನ ಹೊಳೆ ತುಂಬಿ, ಅಕ್ಕಪಕ್ಕದ ಭತ್ತದ ಗದ್ದೆ, ಅಡಿಕೆ ತೋಟಗಳನ್ನು ಆವರಿಸಿದೆ. ಸುಮಾರು 50 ಎಕರೆ ಕೃಷಿ ಭೂಮಿಯಲ್ಲಿ ಬೆಳೆಹಾನಿಯಾಗಿದೆ ಎಂದು ಸ್ಥಳೀಯ ಪ್ರವೀಣ ಹೆಗಡೆ ತಿಳಿಸಿದ್ದಾರೆ.</p>.<p>ವಾನಳ್ಳಿಯಲ್ಲಿ ಶೇಡಿಹೊಳೆಗೆ ಪ್ರವಾಹ ಬಂದಿದ್ದು, ಹೊಳೆಯಂಚಿನ ಭತ್ತದ ಗದ್ದೆ ನೀರಿನಲ್ಲಿ ಮುಳುಗಿದೆ. ಅಡಿಕೆ ತೋಟದಲ್ಲಿ ನೀರು ನಿಂತು, ಮರಗಳಿಗೆ ಹಾಕಿರುವ ಗೊಬ್ಬರ ಕೊಚ್ಚಿಕೊಂಡು ಹೋಗಿದೆ. 50 ಎಕರೆಗೂ ಅಧಿಕ ತೋಟಕ್ಕೆ ಹಾನಿ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ. ಮೂರ್ನಾಲ್ಕು ದಶಕಗಳ ನಂತರ ಮೊದಲ ಬಾರಿಗೆ ಈ ಹೊಳೆಗೆ ನೆರೆ ಬಂದಿದೆ. ಪಟ್ಟಣದ ಹೊಳೆ, ತಣ್ಣೀರು ಹೊಳೆಗಳಿಗೂ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಸುತ್ತಲಿನ ಅಡಿಕೆ ತೋಟಗಳು ಜಲಾವೃತಗೊಂಡಿವೆ.</p>.<p>ಔಡಾಳದ ಹೊಳೆ ಉಕ್ಕಿ 20 ಎಕರೆ ಅಡಿಕೆ ತೋಟ, 20 ಎಕರೆ ಭತ್ತದ ಗದ್ದೆಗೆ ನೀರು ನುಗ್ಗಿದೆ. ಕೆ.ಜಿ.ಹೆಗಡೆ, ಚಂದ್ರಶೇಖರ ಹೆಗಡೆ, ಮಧುಕೇಶ್ವರ ಹೆಗಡೆ, ಮಹಾದೇವ ಮರಾಠಿ, ಓಮು ಮರಾಠಿ ಅವರ ಕೃಷಿ ಕ್ಷೇತ್ರಕ್ಕೆ ಹಾನಿಯಾಗಿದೆ.</p>.<p>ನಿರಂತರ ಮಳೆಗೆ ಹೆಬ್ಬತ್ತಿ ಗ್ರಾಮದಲ್ಲಿ ಮನೆಯೊಂದರ ಗೋಡೆ ಕುಸಿದಿದೆ. ಶಿವಳ್ಳಿ ಗ್ರಾಮದ ಹೊನ್ನೆಕಟ್ಟೆ ಮಜಿರೆಯ ರಸ್ತೆ ಕೊಚ್ಚಿ ಹೋಗಿದೆ. ನಗರದ ಅಶ್ವಿನಿ ವೃತ್ತದ ಬಳಿ ಹಿರೊ ಶೋ ರೂಮ್ನ ಏಳು ಹೊಸ ಬೈಕ್ಗಳಿಗೆ ಹಾನಿಯಾಗಿದೆ.</p>.<p>ಶಾಲ್ಮಲಾ, ಬೇಡ್ತಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಮಳೆಯ ಅಬ್ಬರಕ್ಕೆ ಗೋಳಿಮಕ್ಕಿ ಹೋಗುವ ರಸ್ತೆಯಲ್ಲಿ ಸರಕುಳಿ ಹೊಳೆ ತುಂಬಿ, ಸೇತುವೆ ಮುಳುಗಡೆಯಾಗಿತ್ತು. ಧಾರಾಕಾರ ಮಳೆಯಲ್ಲೂ ಜನರು ಹೊಳೆ ತುಂಬಿರುವ ಸಂಭ್ರಮವನ್ನು ನೋಡಲು ಬಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ತಾಲ್ಲೂಕಿನಲ್ಲಿ ಎರಡು ದಿನಗಳಿಂದ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯಿಂದಾಗಿ ಹಳ್ಳಗಳು ಉಕ್ಕಿ ಹರಿದು ಕೃಷಿ, ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ. ಅಲ್ಲಲ್ಲಿ ಮರ ಮುರಿದು ಬಿದ್ದು ಅನೇಕ ಹಳ್ಳಿಗಳ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.</p>.<p>ನಗರದ ಮಾರಿಕಾಂಬಾ ದೇವಾಲಯದ ಪಕ್ಕದಲ್ಲಿರುವ ಧರ್ಮಛತ್ರದ ಹಳೆಯ ಗೋಡೆಯೊಂದು ಸೋಮವಾರ ಬೆಳಿಗ್ಗೆ ಕುಸಿದು, ನಾಗರಾಜ ಪೂಜಾರಿ ಎಂಬುವರಿಗೆ ಸೇರಿದ ಕಾರು ಜಖಂಗೊಂಡಿದೆ. ಘಟನೆಯಲ್ಲಿ ಸುವರ್ಣಾ ಪೂಜಾರಿ ಎಂಬ ವೃದ್ಧೆಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.</p>.<p>ಕೊಡ್ನಗದ್ದೆ ಪಂಚಾಯ್ತಿ ವ್ಯಾಪ್ತಿಯಲ್ಲಿ ಬಸವನ ಹೊಳೆ ತುಂಬಿ, ಅಕ್ಕಪಕ್ಕದ ಭತ್ತದ ಗದ್ದೆ, ಅಡಿಕೆ ತೋಟಗಳನ್ನು ಆವರಿಸಿದೆ. ಸುಮಾರು 50 ಎಕರೆ ಕೃಷಿ ಭೂಮಿಯಲ್ಲಿ ಬೆಳೆಹಾನಿಯಾಗಿದೆ ಎಂದು ಸ್ಥಳೀಯ ಪ್ರವೀಣ ಹೆಗಡೆ ತಿಳಿಸಿದ್ದಾರೆ.</p>.<p>ವಾನಳ್ಳಿಯಲ್ಲಿ ಶೇಡಿಹೊಳೆಗೆ ಪ್ರವಾಹ ಬಂದಿದ್ದು, ಹೊಳೆಯಂಚಿನ ಭತ್ತದ ಗದ್ದೆ ನೀರಿನಲ್ಲಿ ಮುಳುಗಿದೆ. ಅಡಿಕೆ ತೋಟದಲ್ಲಿ ನೀರು ನಿಂತು, ಮರಗಳಿಗೆ ಹಾಕಿರುವ ಗೊಬ್ಬರ ಕೊಚ್ಚಿಕೊಂಡು ಹೋಗಿದೆ. 50 ಎಕರೆಗೂ ಅಧಿಕ ತೋಟಕ್ಕೆ ಹಾನಿ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ. ಮೂರ್ನಾಲ್ಕು ದಶಕಗಳ ನಂತರ ಮೊದಲ ಬಾರಿಗೆ ಈ ಹೊಳೆಗೆ ನೆರೆ ಬಂದಿದೆ. ಪಟ್ಟಣದ ಹೊಳೆ, ತಣ್ಣೀರು ಹೊಳೆಗಳಿಗೂ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಸುತ್ತಲಿನ ಅಡಿಕೆ ತೋಟಗಳು ಜಲಾವೃತಗೊಂಡಿವೆ.</p>.<p>ಔಡಾಳದ ಹೊಳೆ ಉಕ್ಕಿ 20 ಎಕರೆ ಅಡಿಕೆ ತೋಟ, 20 ಎಕರೆ ಭತ್ತದ ಗದ್ದೆಗೆ ನೀರು ನುಗ್ಗಿದೆ. ಕೆ.ಜಿ.ಹೆಗಡೆ, ಚಂದ್ರಶೇಖರ ಹೆಗಡೆ, ಮಧುಕೇಶ್ವರ ಹೆಗಡೆ, ಮಹಾದೇವ ಮರಾಠಿ, ಓಮು ಮರಾಠಿ ಅವರ ಕೃಷಿ ಕ್ಷೇತ್ರಕ್ಕೆ ಹಾನಿಯಾಗಿದೆ.</p>.<p>ನಿರಂತರ ಮಳೆಗೆ ಹೆಬ್ಬತ್ತಿ ಗ್ರಾಮದಲ್ಲಿ ಮನೆಯೊಂದರ ಗೋಡೆ ಕುಸಿದಿದೆ. ಶಿವಳ್ಳಿ ಗ್ರಾಮದ ಹೊನ್ನೆಕಟ್ಟೆ ಮಜಿರೆಯ ರಸ್ತೆ ಕೊಚ್ಚಿ ಹೋಗಿದೆ. ನಗರದ ಅಶ್ವಿನಿ ವೃತ್ತದ ಬಳಿ ಹಿರೊ ಶೋ ರೂಮ್ನ ಏಳು ಹೊಸ ಬೈಕ್ಗಳಿಗೆ ಹಾನಿಯಾಗಿದೆ.</p>.<p>ಶಾಲ್ಮಲಾ, ಬೇಡ್ತಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಮಳೆಯ ಅಬ್ಬರಕ್ಕೆ ಗೋಳಿಮಕ್ಕಿ ಹೋಗುವ ರಸ್ತೆಯಲ್ಲಿ ಸರಕುಳಿ ಹೊಳೆ ತುಂಬಿ, ಸೇತುವೆ ಮುಳುಗಡೆಯಾಗಿತ್ತು. ಧಾರಾಕಾರ ಮಳೆಯಲ್ಲೂ ಜನರು ಹೊಳೆ ತುಂಬಿರುವ ಸಂಭ್ರಮವನ್ನು ನೋಡಲು ಬಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>