ಕರ್ನಾಟಕದ ವಿದ್ಯುತ್ ನಿಗಮವು ಜಲಾಶಯದ ಕೆಳಗಿನ ಭಾಗದ ನಿವಾಸಿಗಳಿಗೆ ಮೊದಲ ಮುನ್ಸೂಚನೆ ನೀಡಿದ್ದು, ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಹೊರ ಬಿಡಲಾಗುವುದು ಎಂದು ತಿಳಿಸಿದೆ. ಕಾಳಿ ನದಿಯ ಇಕ್ಕೆಲಗಳಲ್ಲಿ ವಾಸಿಸುತ್ತಿರುವವರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಸೂಚಿಸಿದೆ.