ಕಾನೇರಿ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ಕುಂಬಾರವಾಡ ಸಮೀಪದ ಕಾತೇಲಿ ಶ್ಯಾಂಡಿಲ್ ಮಹಾರಾಜ್ ಸೇತುವೆಯ ಜಲಾವೃತವಾಗಿದೆ. ಒಂದು ಬದಿ ರಸ್ತೆಯಲ್ಲಿ ನೀರು ಹರಿಯುತ್ತಿದ್ದು, ಜನರು ರಸ್ತೆ ದಾಟಲು ಹರಸಾಹಸ ಪಡಬೇಕಾಯಿತು. ಕುಂಬಾರವಾಡದಿಂದ ಗೊಡಸೇತ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಗುರುವಾರ ಬೆಳಿಗ್ಗೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದು ಸಂಚಾರಕ್ಕೆ ಸಮಸ್ಯೆ ಎದುರಾಯಿತು.