<figcaption>""</figcaption>.<p><strong>ಕಾರವಾರ:</strong> ತಾಲ್ಲೂಕಿನ ವಿವಿಧೆಡೆ ಮಂಗಳವಾರ ಬೆಳಿಗ್ಗೆಯಿಂದ ಗುಡುಗು ಸಹಿತ ಜೋರಾಗಿ ಮಳೆ ಸುರಿಯುತ್ತಿದೆ. ಆಗಸದಲ್ಲಿ ದಟ್ಟವಾದ ಕಾರ್ಮೋಡ ಕವಿದಿದೆ.</p>.<p>ಬೆಳಿಗ್ಗೆಯಿಂದಲೂ ಜೋರಾಗಿ ಗಾಳಿ ಬೀಸುತ್ತಿತ್ತು. ಆಗಾಗ ಬಿಸಿಲು ಕಾಣಿಸಿಕೊಂಡು ಮರೆಯಾಗುತ್ತಿತ್ತು. ಸೋಮವಾರ ಸಂಜೆಯೂ ನಗರದಲ್ಲಿ ಉತ್ತಮ ಮಳೆಯಾಗಿದೆ.</p>.<p>ಉತ್ತರ ಕನ್ನಡದಲ್ಲಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಈಗಾಗಲೇ ಶುರುವಾಗಿವೆ. ಭತ್ತದ ವ್ಯವಸಾಯ ಮಾಡುವವರು ಹೊಲಗಳನ್ನು ಉಳುಮೆ ಬಿತ್ತನೆಗೆ ಸಿದ್ಧತೆ ಆರಂಭಿಸಿದ್ದಾರೆ. ಅಡಿಕೆ ತೋಟಗಳಿಗೆ ಔಷಧ ಸಿಂಪಡಿಸಲು ಅಗತ್ಯವಾದ ಮೈಲುತುತ್ತ ಹಾಗೂ ಸುಣ್ಣವನ್ನು ಸಂಗ್ರಹಿಸಲು ಕೃಷಿಕರು ಮುಂದಾಗಿದ್ದಾರೆ.</p>.<p>ಈ ಬಾರಿ ಮುಂಗಾರು ವಾಡಿಕೆಯಂತೆ ಶುರುವಾಗಲಿದೆ ಮತ್ತು ಉತ್ತಮವಾಗಿ ಮಳೆ ಬೀಳಲಿದೆ ಎಂಬ ಮುನ್ಸೂಚನೆ ರೈತರ ಸಂತಸಕ್ಕೆ ಕಾರಣವಾಗಿದೆ.</p>.<p>ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಗಂಟೆಗೆ ಗರಿಷ್ಠ 80 ಕಿಲೋಮೀಟರ್ ನಷ್ಟು ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾಗಾಗಿ ಮೀನುಗಾರರು ಕಡಲಿಗೆ ಹೋಗಬಾರದು ಎಂದು ಎಚ್ಚರಿಕೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಕಾರವಾರ:</strong> ತಾಲ್ಲೂಕಿನ ವಿವಿಧೆಡೆ ಮಂಗಳವಾರ ಬೆಳಿಗ್ಗೆಯಿಂದ ಗುಡುಗು ಸಹಿತ ಜೋರಾಗಿ ಮಳೆ ಸುರಿಯುತ್ತಿದೆ. ಆಗಸದಲ್ಲಿ ದಟ್ಟವಾದ ಕಾರ್ಮೋಡ ಕವಿದಿದೆ.</p>.<p>ಬೆಳಿಗ್ಗೆಯಿಂದಲೂ ಜೋರಾಗಿ ಗಾಳಿ ಬೀಸುತ್ತಿತ್ತು. ಆಗಾಗ ಬಿಸಿಲು ಕಾಣಿಸಿಕೊಂಡು ಮರೆಯಾಗುತ್ತಿತ್ತು. ಸೋಮವಾರ ಸಂಜೆಯೂ ನಗರದಲ್ಲಿ ಉತ್ತಮ ಮಳೆಯಾಗಿದೆ.</p>.<p>ಉತ್ತರ ಕನ್ನಡದಲ್ಲಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಈಗಾಗಲೇ ಶುರುವಾಗಿವೆ. ಭತ್ತದ ವ್ಯವಸಾಯ ಮಾಡುವವರು ಹೊಲಗಳನ್ನು ಉಳುಮೆ ಬಿತ್ತನೆಗೆ ಸಿದ್ಧತೆ ಆರಂಭಿಸಿದ್ದಾರೆ. ಅಡಿಕೆ ತೋಟಗಳಿಗೆ ಔಷಧ ಸಿಂಪಡಿಸಲು ಅಗತ್ಯವಾದ ಮೈಲುತುತ್ತ ಹಾಗೂ ಸುಣ್ಣವನ್ನು ಸಂಗ್ರಹಿಸಲು ಕೃಷಿಕರು ಮುಂದಾಗಿದ್ದಾರೆ.</p>.<p>ಈ ಬಾರಿ ಮುಂಗಾರು ವಾಡಿಕೆಯಂತೆ ಶುರುವಾಗಲಿದೆ ಮತ್ತು ಉತ್ತಮವಾಗಿ ಮಳೆ ಬೀಳಲಿದೆ ಎಂಬ ಮುನ್ಸೂಚನೆ ರೈತರ ಸಂತಸಕ್ಕೆ ಕಾರಣವಾಗಿದೆ.</p>.<p>ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಗಂಟೆಗೆ ಗರಿಷ್ಠ 80 ಕಿಲೋಮೀಟರ್ ನಷ್ಟು ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾಗಾಗಿ ಮೀನುಗಾರರು ಕಡಲಿಗೆ ಹೋಗಬಾರದು ಎಂದು ಎಚ್ಚರಿಕೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>