ಶಿರಸಿ: ಮನೆ ಕುಸಿದು ತಾಲ್ಲೂಕಿನ ಗುಡ್ನಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮುಂಡಿಗೆಹಳ್ಳಿಯ ಯಶೋದಾ ಬಂಗಾರ್ಯ ಗೌಡ (31) ಮಂಗಳವಾರ ಮೃತಪಟ್ಟಿದ್ದಾರೆ.
ಅವರು ವಾಸಿಸುತ್ತಿದ್ದ ಮನೆಯ ಗೋಡೆ ಸತತ ಮಳೆಯಿಂದ ಕುಸಿದು ಬಿದ್ದಿದೆ. ಸ್ಥಳಕ್ಕೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಎರಡು ದಿನದೊಳಗೆ ಮೃತಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಒದಗಿಸುವ ಭರವಸೆ ನೀಡಿದರು.