<p><strong>ಕಾರವಾರ:</strong> ಉತ್ತರ ಕನ್ನಡದ ಕರಾವಳಿಯಲ್ಲಿ ಗುರುವಾರ ನಸುಕಿನಿಂದಲೇ ಜೋರಾಗಿ ಮಳೆಯಾಗುತ್ತಿದೆ. ದಟ್ಟವಾದ ಮೋಡ ಕವಿದಿದ್ದು, ವರ್ಷಧಾರೆ ಮುಂದುವರಿಯುವ ಲಕ್ಷಣಗಳಿವೆ.</p>.<p>ಭಟ್ಕಳದ ಶಿರಾಲಿಯಲ್ಲಿ ಜನತಾ ವಿದ್ಯಾಲಯದ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ಹರಿಯುತ್ತಿದೆ. ವಾಹನಗಳ ಸಂಚಾರಕ್ಕೆ ಅಡಚಣೆಯಾಗಿದೆ. ಅಸಮರ್ಪಕವಾದ ಚತುಷ್ಪಥ ಕಾಮಗಾರಿಯಿಂದ ಸಮಸ್ಯೆಯಾಗಿದೆ ಎಂದು ಸ್ಥಳೀಯರು ಐ.ಆರ್.ಬಿ ಕಂಪನಿ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಕಾರವಾರ ನಗರದ ಹಬ್ಬುವಾಡದಲ್ಲಿ ಚರಂಡಿ ಉಕ್ಕಿ ಹರಿಯುತ್ತಿದೆ. ರಾಜ್ಯ ಹೆದ್ದಾರಿ ಮತ್ತೊಮ್ಮೆ ಜಲಾವೃತವಾಗುವ ಹಂತದಲ್ಲಿದೆ. ಇದೇ ರೀತಿ ಹಲವು ಬಡಾವಣೆಗಳಲ್ಲಿ ನೀರು ನಿಂತಿದೆ.</p>.<p>ಮಲೆನಾಡಿನ ಶಿರಸಿ, ಯಲ್ಲಾಪುರ, ಜೊಯಿಡಾ, ಸಿದ್ದಾಪುರ ಭಾಗದಲ್ಲಿ ಜಿಟಿಜಿಟಿ ಮಳೆಯಾಗುತ್ತಿದೆ. ಮುಂಡಗೋಡ ಮತ್ತು ಹಳಿಯಾಳದಲ್ಲೂ ಮಳೆಯಾಗಿದೆ.</p>.<p>24 ಗಂಟೆಗಳಲ್ಲಿ ಅಂಕೋಲಾದಲ್ಲಿ 11.6 ಸೆಂಟಿಮೀಟರ್, ಹೊನ್ನಾವರದಲ್ಲಿ 11.3 ಸೆಂಟಿಮೀಟರ್, ಕಾರವಾರದಲ್ಲಿ 9.1 ಸೆಂಟಿಮೀಟರ್ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ಉತ್ತರ ಕನ್ನಡದ ಕರಾವಳಿಯಲ್ಲಿ ಗುರುವಾರ ನಸುಕಿನಿಂದಲೇ ಜೋರಾಗಿ ಮಳೆಯಾಗುತ್ತಿದೆ. ದಟ್ಟವಾದ ಮೋಡ ಕವಿದಿದ್ದು, ವರ್ಷಧಾರೆ ಮುಂದುವರಿಯುವ ಲಕ್ಷಣಗಳಿವೆ.</p>.<p>ಭಟ್ಕಳದ ಶಿರಾಲಿಯಲ್ಲಿ ಜನತಾ ವಿದ್ಯಾಲಯದ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ಹರಿಯುತ್ತಿದೆ. ವಾಹನಗಳ ಸಂಚಾರಕ್ಕೆ ಅಡಚಣೆಯಾಗಿದೆ. ಅಸಮರ್ಪಕವಾದ ಚತುಷ್ಪಥ ಕಾಮಗಾರಿಯಿಂದ ಸಮಸ್ಯೆಯಾಗಿದೆ ಎಂದು ಸ್ಥಳೀಯರು ಐ.ಆರ್.ಬಿ ಕಂಪನಿ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಕಾರವಾರ ನಗರದ ಹಬ್ಬುವಾಡದಲ್ಲಿ ಚರಂಡಿ ಉಕ್ಕಿ ಹರಿಯುತ್ತಿದೆ. ರಾಜ್ಯ ಹೆದ್ದಾರಿ ಮತ್ತೊಮ್ಮೆ ಜಲಾವೃತವಾಗುವ ಹಂತದಲ್ಲಿದೆ. ಇದೇ ರೀತಿ ಹಲವು ಬಡಾವಣೆಗಳಲ್ಲಿ ನೀರು ನಿಂತಿದೆ.</p>.<p>ಮಲೆನಾಡಿನ ಶಿರಸಿ, ಯಲ್ಲಾಪುರ, ಜೊಯಿಡಾ, ಸಿದ್ದಾಪುರ ಭಾಗದಲ್ಲಿ ಜಿಟಿಜಿಟಿ ಮಳೆಯಾಗುತ್ತಿದೆ. ಮುಂಡಗೋಡ ಮತ್ತು ಹಳಿಯಾಳದಲ್ಲೂ ಮಳೆಯಾಗಿದೆ.</p>.<p>24 ಗಂಟೆಗಳಲ್ಲಿ ಅಂಕೋಲಾದಲ್ಲಿ 11.6 ಸೆಂಟಿಮೀಟರ್, ಹೊನ್ನಾವರದಲ್ಲಿ 11.3 ಸೆಂಟಿಮೀಟರ್, ಕಾರವಾರದಲ್ಲಿ 9.1 ಸೆಂಟಿಮೀಟರ್ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>