ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಜಿ.ಜಿ.ಹೆಗಡೆ ಕಡೆಕೋಡಿ ಮಾತನಾಡಿ, ‘ಉತ್ತರ ಕನ್ನಡ ಜಿಲ್ಲೆಗೆ ನಿಯಮಿತ ವಿದ್ಯುತ್ ಕಡಿತದಿಂದ ವಿನಾಯಿತಿ ಇದೆ. ಆದರೆ, ಪ್ರತಿದಿನವೂ ವಿದ್ಯುತ್ ಕಡಿತವಾಗುವ ಸಮಸ್ಯೆ ನಿಂತಿಲ್ಲ. ರೈತರಿಗೆ ಏಳು ತಾಸು ನಿರಂತರ ವಿದ್ಯುತ್ ಪೂರೈಸಬೇಕು. ತಾಲ್ಲೂಕಿನ ಗ್ರಾಮೀಣ ಭಾಗದ ರೈತರಿಗೆ ಮೂರು ತಾಸು ಸಹ ನಿರಂತರ ವಿದ್ಯುತ್ ಸಿಗುತ್ತಿಲ್ಲ. ಗ್ರಾಹಕ ಕುಂದುಕೊರತೆ ನಿವಾರಣಾ ಸಮಿತಿಗೆ ರಾಜಕಿಯೇತರ ವ್ಯಕ್ತಿಗಳ ನೇಮಕವಾಗಬೇಕು ಎಂಬ ನಿಯಮವಿದ್ದರೂ, ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ಬೇಸರ ಮೂಡಿಸಿದೆ’ ಎಂದರು.