ಕಾರವಾರ: ‘ಕೋವಿಡ್ 19’ ವೈರಾಣು ಸೋಂಕು ಭೀತಿಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲೂ ವಿವಿಧ ಮುನ್ನೆಚ್ಚರಿಕಾ ಕ್ರಮಗಳನ್ನು ಜಿಲ್ಲಾಡಳಿತ ಜಾರಿ ಮಾಡಿದೆ.ಕಾರವಾರ ವಾಣಿಜ್ಯ ಬಂದರು ಸೇರಿದಂತೆ ಜಿಲ್ಲೆಯ ಎಲ್ಲ ಪ್ರವಾಸಿ ಸ್ಥಳಗಳಲ್ಲಿ ಕಟ್ಟೆಚ್ಚರ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ ಕುಮಾರ ಸೂಚಿಸಿದ್ದಾರೆ.
ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಜಿಲ್ಲಾ ಆಸ್ಪತ್ರೆಯ ಮುಖ್ಯಸ್ಥರು, ವೈದ್ಯಕೀಯ ಕಾಲೇಜು ಮುಖ್ಯಸ್ಥರು, ನೌಕಾ ನೆಲೆ ಮತ್ತು ಬಂದರು ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.