ದೇಶದ ವಿವಿಧೆಡೆ ಕಟ್ಟೆಚ್ಚರ ಘೋಷಣೆ ಮಾಡಿರುವ ಸಂಬಂಧ ನಗರದಲ್ಲೂ ಎಚ್ಚರಿಕೆ ವಹಿಸುವಂತೆ ಮೀನುಗಾರಿಕೆ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಶುಕ್ರವಾರ ಸೂಚಿಸಿದ್ದರು. ಸೀಬರ್ಡ್ ನೌಕಾನೆಲೆಯಲ್ಲೂ ಸಾಮಾನ್ಯ ದಿನಗಳಿಗಿಂತ ಹೆಚ್ಚಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.