<p><strong>ಗೋಕರ್ಣ</strong>: ಧಾರ್ಮಿಕ ಕ್ಷೇತ್ರ ಗೋಕರ್ಣದ ಪುರಾಣ ಪ್ರಸಿದ್ಧ ಭದ್ರಕಾಳಿ ಮತ್ತು ಮಹಾಗಣಪತಿ ಮಂದಿರದ ನೂತನ ಆಡಳಿತ ಸಮಿತಿ ಆಯ್ಕೆ ಪ್ರಕ್ರಿಯೆಗೆ ಹೈಕೋರ್ಟ್ನ ಧಾರವಾಡದ ಏಕಸದಸ್ಯ ಪೀಠ ಮಂಗಳವಾರ ತಡೆಯಾಜ್ಞೆ ನೀಡಿದೆ.</p>.<p>ರಾಜ್ಯ ಸರ್ಕಾರದ ಧಾರ್ಮಿಕ ಪರಿಷತ್, ಎರಡೂ ದೇವಸ್ಥಾನಗಳಿಗೆ ಆಡಳಿತ ಸಮಿತಿಯ ಸದಸ್ಯರನ್ನು ನೇಮಕ ಮಾಡಲು ಏ.6ರಂದು ಆಯ್ಕೆ ಪ್ರಕ್ರಿಯೆ ನಡೆಸಿತ್ತು. ಇದರ ವಿರುದ್ಧ ಎರಡೂ ದೇವಸ್ಥಾನಗಳ ಧರ್ಮದರ್ಶಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.</p>.<p>ಧರ್ಮದರ್ಶಿಗಳ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಸೂರಜ್ ಗೋವಿಂದರಾಜ್, ಕಳೆದ ವಾರವೇ ಆಯ್ಕೆಯಾದ ಸಮಿತಿಯ ಸದಸ್ಯರ ಪಟ್ಟಿಯನ್ನು ಪ್ರಕಟಿಸದಂತೆ ಆದೇಶಿಸಿದ್ದರು. ಮಂಗಳವಾರ ಪುನಃ ವಿಚಾರಣೆ ನಡೆಸಿದ ನ್ಯಾಯಾಧೀಶರು, ಎರಡೂ ದೇವಸ್ಥಾನಗಳ ಆಡಳಿತ ಸಮಿತಿಯ ಸಂಪೂರ್ಣ ಆಯ್ಕೆ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿ ಆದೇಶಿಸಿದ್ದಾರೆ.</p>.<p>ಧರ್ಮದರ್ಶಿಗಳ ಪರ ಶಿರಸಿಯ ಹಿರಿಯ ವಕೀಲ ಅರಣಾಚಲ ಹೆಗಡೆ ವಾದ ಮಂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಕರ್ಣ</strong>: ಧಾರ್ಮಿಕ ಕ್ಷೇತ್ರ ಗೋಕರ್ಣದ ಪುರಾಣ ಪ್ರಸಿದ್ಧ ಭದ್ರಕಾಳಿ ಮತ್ತು ಮಹಾಗಣಪತಿ ಮಂದಿರದ ನೂತನ ಆಡಳಿತ ಸಮಿತಿ ಆಯ್ಕೆ ಪ್ರಕ್ರಿಯೆಗೆ ಹೈಕೋರ್ಟ್ನ ಧಾರವಾಡದ ಏಕಸದಸ್ಯ ಪೀಠ ಮಂಗಳವಾರ ತಡೆಯಾಜ್ಞೆ ನೀಡಿದೆ.</p>.<p>ರಾಜ್ಯ ಸರ್ಕಾರದ ಧಾರ್ಮಿಕ ಪರಿಷತ್, ಎರಡೂ ದೇವಸ್ಥಾನಗಳಿಗೆ ಆಡಳಿತ ಸಮಿತಿಯ ಸದಸ್ಯರನ್ನು ನೇಮಕ ಮಾಡಲು ಏ.6ರಂದು ಆಯ್ಕೆ ಪ್ರಕ್ರಿಯೆ ನಡೆಸಿತ್ತು. ಇದರ ವಿರುದ್ಧ ಎರಡೂ ದೇವಸ್ಥಾನಗಳ ಧರ್ಮದರ್ಶಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.</p>.<p>ಧರ್ಮದರ್ಶಿಗಳ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಸೂರಜ್ ಗೋವಿಂದರಾಜ್, ಕಳೆದ ವಾರವೇ ಆಯ್ಕೆಯಾದ ಸಮಿತಿಯ ಸದಸ್ಯರ ಪಟ್ಟಿಯನ್ನು ಪ್ರಕಟಿಸದಂತೆ ಆದೇಶಿಸಿದ್ದರು. ಮಂಗಳವಾರ ಪುನಃ ವಿಚಾರಣೆ ನಡೆಸಿದ ನ್ಯಾಯಾಧೀಶರು, ಎರಡೂ ದೇವಸ್ಥಾನಗಳ ಆಡಳಿತ ಸಮಿತಿಯ ಸಂಪೂರ್ಣ ಆಯ್ಕೆ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿ ಆದೇಶಿಸಿದ್ದಾರೆ.</p>.<p>ಧರ್ಮದರ್ಶಿಗಳ ಪರ ಶಿರಸಿಯ ಹಿರಿಯ ವಕೀಲ ಅರಣಾಚಲ ಹೆಗಡೆ ವಾದ ಮಂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>