ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವಸ್ಥಾನ ಆಡಳಿತ ಸಮಿತಿ ಆಯ್ಕೆಗೆ ಹೈಕೋರ್ಟ್ ತಡೆಯಾಜ್ಞೆ

ಗೋಕರ್ಣದ ಭದ್ರಕಾಳಿ, ಮಹಾಗಣಪತಿ ಮಂದಿರ
Last Updated 21 ಏಪ್ರಿಲ್ 2022, 15:27 IST
ಅಕ್ಷರ ಗಾತ್ರ

ಗೋಕರ್ಣ: ಧಾರ್ಮಿಕ ಕ್ಷೇತ್ರ ಗೋಕರ್ಣದ ಪುರಾಣ ಪ್ರಸಿದ್ಧ ಭದ್ರಕಾಳಿ ಮತ್ತು ಮಹಾಗಣಪತಿ ಮಂದಿರದ ನೂತನ ಆಡಳಿತ ಸಮಿತಿ ಆಯ್ಕೆ ಪ್ರಕ್ರಿಯೆಗೆ ಹೈಕೋರ್ಟ್‌ನ ಧಾರವಾಡದ ಏಕಸದಸ್ಯ ಪೀಠ ಮಂಗಳವಾರ ತಡೆಯಾಜ್ಞೆ ನೀಡಿದೆ.

ರಾಜ್ಯ ಸರ್ಕಾರದ ಧಾರ್ಮಿಕ ಪರಿಷತ್, ಎರಡೂ ದೇವಸ್ಥಾನಗಳಿಗೆ ಆಡಳಿತ ಸಮಿತಿಯ ಸದಸ್ಯರನ್ನು ನೇಮಕ ಮಾಡಲು ಏ.6ರಂದು ಆಯ್ಕೆ ಪ್ರಕ್ರಿಯೆ ನಡೆಸಿತ್ತು. ಇದರ ವಿರುದ್ಧ ಎರಡೂ ದೇವಸ್ಥಾನಗಳ ಧರ್ಮದರ್ಶಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.

ಧರ್ಮದರ್ಶಿಗಳ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಸೂರಜ್ ಗೋವಿಂದರಾಜ್, ಕಳೆದ ವಾರವೇ ಆಯ್ಕೆಯಾದ ಸಮಿತಿಯ ಸದಸ್ಯರ ಪಟ್ಟಿಯನ್ನು ಪ್ರಕಟಿಸದಂತೆ ಆದೇಶಿಸಿದ್ದರು. ಮಂಗಳವಾರ ಪುನಃ ವಿಚಾರಣೆ ನಡೆಸಿದ ನ್ಯಾಯಾಧೀಶರು, ಎರಡೂ ದೇವಸ್ಥಾನಗಳ ಆಡಳಿತ ಸಮಿತಿಯ ಸಂಪೂರ್ಣ ಆಯ್ಕೆ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿ ಆದೇಶಿಸಿದ್ದಾರೆ.

ಧರ್ಮದರ್ಶಿಗಳ ಪರ ಶಿರಸಿಯ ಹಿರಿಯ ವಕೀಲ ಅರಣಾಚಲ ಹೆಗಡೆ ವಾದ ಮಂಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT