ಈಕೆ ತನ್ನ ಗಂಡ ಹಾಗೂ ಮಗನೊಂದಿಗೆ ಅಕ್ಕುಂಜಿ ಗ್ರಾಮದ ವ್ಯಾಪ್ತಿಯಲ್ಲಿರುವ ತಮ್ಮ ಗದ್ದೆಗೆ ಭತ್ತದ ಹೊರೆ ಕಟ್ಟಲು ಹೋಗಿದ್ದು, ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾಗ ಜೇನು ನೊಣಗಳ ಗುಂಪು ದಾಳಿ ಮಾಡಿದ್ದವು. ಆಗ ಮೂವರೂ ದಿಕ್ಕಾಪಾಲಾಗಿ ಓಡಿದರು. ನಂತರ
ಗದ್ದೆಯ ಸಮೀಪದ ಬೇಣದಲ್ಲಿ ಆಕೆಯ ಶವ ಸಿಕ್ಕಿದೆ. ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.