ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೇನುನೊಣ ದಾಳಿ: ಮಹಿಳೆ ಸಾವು

Last Updated 30 ನವೆಂಬರ್ 2020, 16:30 IST
ಅಕ್ಷರ ಗಾತ್ರ

ಸಿದ್ದಾಪುರ : ಜೇನು ನೊಣಗಳ ದಾಳಿಯಿಂದ ತಾಲ್ಲೂಕಿನ ಹಂಜಿಗಿಯ ಮಹಾಲಕ್ಷ್ಮೀ ರಾಮಚಂದ್ರ ಮಡಿವಾಳ (47) ಎಂಬುವರು ಭಾನುವಾರ ಮೃತಪಟ್ಟಿದ್ದಾರೆ.

ಈಕೆ ತನ್ನ ಗಂಡ ಹಾಗೂ ಮಗನೊಂದಿಗೆ ಅಕ್ಕುಂಜಿ ಗ್ರಾಮದ ವ್ಯಾಪ್ತಿಯಲ್ಲಿರುವ ತಮ್ಮ ಗದ್ದೆಗೆ ಭತ್ತದ ಹೊರೆ ಕಟ್ಟಲು ಹೋಗಿದ್ದು, ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾಗ ಜೇನು ನೊಣಗಳ ಗುಂಪು ದಾಳಿ ಮಾಡಿದ್ದವು. ಆಗ ಮೂವರೂ ದಿಕ್ಕಾಪಾಲಾಗಿ ಓಡಿದರು. ನಂತರ
ಗದ್ದೆಯ ಸಮೀಪದ ಬೇಣದಲ್ಲಿ ಆಕೆಯ ಶವ ಸಿಕ್ಕಿದೆ. ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT