ಈ ವರ್ಷ ಬೇಸಿಗೆಯ ಅತಿಯಾದ ಉಷ್ಣಾಂಶದಿಂದಾಗಿ ಗೇರು ಮತ್ತು ಮಾವು ಬೆಳೆಗಳ ಹೂವುಗಳು ಸುಟ್ಟಂತಾಗಿ ಬೆಳೆ ಕಡಿಮೆಯಾಗಿದೆ. ಅಡಿಕೆಗೆ ಸಿಂಗಾರ ಡೈಬ್ಯಾಕ್ ರೋಗ, ಬಂಜೆ ಸಿಂಗಾರ ಮತ್ತು ಬಂಜೆ ಹೂ ಉತ್ಪತ್ತಿಯಾಗಿ ಸಿಂಗಾರ ಒಣಗುವ ಪ್ರಮಾಣ ಜಾಸ್ತಿಯಾಗಿರುವುದು ಹೆಚ್ಚಿನ ತೋಟಗಳಲ್ಲಿ ಕಂಡು ಬಂದಿದೆ. ಆದ್ದರಿಂದ ರೈತರು ಮಳೆಗಾಲದಲ್ಲಿ ತೋಟದಲ್ಲಿ ಬಾಳೆ, ಸೂಜಿಮೆಣಸು, ಸುವರ್ಣಗಡ್ಡೆ, ಕಾಳುಮೆಣಸು, ಶುಂಠಿ, ಅರಿಶಿನ ಇತ್ಯಾದಿ ಉಪ ಬೆಳೆಗಳನ್ನು ತೋಟಗಳ ಪರಿಸ್ಥಿತಿಗೆ ಅನುಗುಣವಾಗಿ ಆಯ್ಕೆ ಮಾಡಿಕೊಂಡು, ಬೆಳೆಯುವುದರ ಮೂಲಕ ಆರ್ಥಿಕ ನಷ್ಟವನ್ನು ಕಡಿಮೆಗೊಳಿಸಿಕೊಳ್ಳಬಹುದು.