<p><strong>ಶಿರಸಿ:</strong> ಸಮಾಜ ಕಲ್ಯಾಣ ಇಲಾಖೆಯಿಂದ ಜಿಲ್ಲೆಯ ನಾಲ್ಕು ಕಡೆ 2018-19ರಲ್ಲಿ ಮಂಜೂರಾಗಿದ್ದ ವಿದ್ಯಾರ್ಥಿ ವಸತಿ ನಿಲಯಗಳು ಅರ್ಧಕ್ಕೆ ಸ್ಥಗಿತಗೊಂಡಿವೆ.</p>.<p>ಶಿರಸಿ, ಕಾರವಾರ, ಹಳಿಯಾಳ ಮತ್ತು ಕುಮಟಾದಲ್ಲಿ ₹5 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ಕಟ್ಟಡಗಳು ಚಾವಣಿ ಹಂತಕ್ಕೆ ತಲುಪಿದ ಮೇಲೆ ಗುತ್ತಿಗೆ ಪಡೆದಿದ್ದ ವೆಕ್ಟರ್ ಎಂಬ ಸಂಸ್ಥೆ ಕೆಲಸ ಸ್ಥಗಿತಗೊಳಿಸಿದೆ ಎಂಬ ಆರೋಪವಿದೆ.</p>.<p>ಶಿರಸಿಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ, ಕಾರವಾರದ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ, ಕುಮಟಾದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ಹಳಿಯಾಳದ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ಕಾಮಗಾರಿ ನನೆಗುದಿಗೆ ಬಿದ್ದಂತಾಗಿದೆ.</p>.<p>ನಾಲ್ಕು ಕಡೆಗಳಲ್ಲಿ ಲಕ್ಷಾಂತರ ವೆಚ್ಚ ಭರಿಸಿ ಖಾಸಗಿ ಕಟ್ಟಡಗಳನ್ನು ಬಾಡಿಗೆಗೆ ಪಡೆಯಬೇಕಾದ ಅನಿವಾರ್ಯತೆ ಉಂಟಾಗಿದೆ. ಪ್ರೌಢಶಾಲೆ, ಕಾಲೇಜು ತರಗತಿಗಳು ಆರಂಭಗೊಂಡಿದ್ದರೂ ಹಾಸ್ಟೆಲ್ ಸೌಲಭ್ಯ ದೊರೆಯದೆ ದೂರದ ಹಾಗೂ ಕುಗ್ರಾಮಗಳ ವಿದ್ಯಾರ್ಥಿಗಳು ಶಾಲೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ.</p>.<p>ಕೋವಿಡ್ ಕಾರಣದಿಂದ ಶಾಲೆಗಳು ಒಂದೂವರೆ ವರ್ಷದಿಂದ ಬಾಗಿಲು ತೆರೆದಿರಲಿಲ್ಲ. ಹೀಗಾಗಿ ಹಾಸ್ಟೆಲ್ ಕೊರತೆ ಸಮಸ್ಯೆ ಕಾಡಲಿಲ್ಲ. ಈಗ ಶಾಲೆಗಳನ್ನು ಹಂತ ಹಂತವಾಗಿ ತೆರೆಯಲಾಗುತ್ತಿದ್ದು ವಿದ್ಯಾರ್ಥಿ ವಸತಿ ನಿಲಯಗಳ ಅಗತ್ಯವಿದೆ. ಆದರೆ ಇನ್ನೂ ಹಾಸ್ಟೆಲ್ಗಳು ಕಾರ್ಯಾರಂಭ ಮಾಡಿಲ್ಲ.</p>.<p>‘ಹಾಸ್ಟೆಲ್ ಇಲ್ಲದೆ ತರಗತಿಗೆ ಹೋಗಲು ಆಗುತ್ತಿಲ್ಲ. ಇದು ಶಿಕ್ಷಣಕ್ಕೆ ತೊಡಕಾಗುತ್ತಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲಕ್ಕೆ ಹಾಸ್ಟೆಲ್ ಬೇಗ ಆರಂಭಿಸಬೇಕು’ ಎಂದು ವಿದ್ಯಾರ್ಥಿನಿ ಸೌಮ್ಯ ಆರೇರ ಹೇಳಿದರು.</p>.<p>‘ಕೆಲಸ ಸ್ಥಗಿತಗೊಳಿಸಿದ್ದ ಕಂಪನಿಗೆನೋಟಿಸ್ ನೀಡಲಾಗಿತ್ತು. ಅವಧಿಗೆ ಸರಿಯಾಗಿ ಕಾಮಗಾರಿ ನಡೆಸದ ಕಾರಣ ಕಪ್ಪುಪಟ್ಟಿಗೆ ಸೇರಿಸಲು ಪ್ರಸ್ತಾವ ಸಲ್ಲಿಸಿದ್ದೇವೆ. ಬೇರೆ ಕಂಪನಿಗೆ ಟೆಂಡರ್ ನೀಡಲಾಗಿದೆ. ಕೆಲಸ ಶೀಘ್ರ ಮುಗಿಸಲು ಸೂಚಿಸಲಾಗಿದೆ’ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಎಸ್.ಪುರುಷೋತ್ತಮ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ಸಮಾಜ ಕಲ್ಯಾಣ ಇಲಾಖೆಯಿಂದ ಜಿಲ್ಲೆಯ ನಾಲ್ಕು ಕಡೆ 2018-19ರಲ್ಲಿ ಮಂಜೂರಾಗಿದ್ದ ವಿದ್ಯಾರ್ಥಿ ವಸತಿ ನಿಲಯಗಳು ಅರ್ಧಕ್ಕೆ ಸ್ಥಗಿತಗೊಂಡಿವೆ.</p>.<p>ಶಿರಸಿ, ಕಾರವಾರ, ಹಳಿಯಾಳ ಮತ್ತು ಕುಮಟಾದಲ್ಲಿ ₹5 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ಕಟ್ಟಡಗಳು ಚಾವಣಿ ಹಂತಕ್ಕೆ ತಲುಪಿದ ಮೇಲೆ ಗುತ್ತಿಗೆ ಪಡೆದಿದ್ದ ವೆಕ್ಟರ್ ಎಂಬ ಸಂಸ್ಥೆ ಕೆಲಸ ಸ್ಥಗಿತಗೊಳಿಸಿದೆ ಎಂಬ ಆರೋಪವಿದೆ.</p>.<p>ಶಿರಸಿಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ, ಕಾರವಾರದ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ, ಕುಮಟಾದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ಹಳಿಯಾಳದ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ಕಾಮಗಾರಿ ನನೆಗುದಿಗೆ ಬಿದ್ದಂತಾಗಿದೆ.</p>.<p>ನಾಲ್ಕು ಕಡೆಗಳಲ್ಲಿ ಲಕ್ಷಾಂತರ ವೆಚ್ಚ ಭರಿಸಿ ಖಾಸಗಿ ಕಟ್ಟಡಗಳನ್ನು ಬಾಡಿಗೆಗೆ ಪಡೆಯಬೇಕಾದ ಅನಿವಾರ್ಯತೆ ಉಂಟಾಗಿದೆ. ಪ್ರೌಢಶಾಲೆ, ಕಾಲೇಜು ತರಗತಿಗಳು ಆರಂಭಗೊಂಡಿದ್ದರೂ ಹಾಸ್ಟೆಲ್ ಸೌಲಭ್ಯ ದೊರೆಯದೆ ದೂರದ ಹಾಗೂ ಕುಗ್ರಾಮಗಳ ವಿದ್ಯಾರ್ಥಿಗಳು ಶಾಲೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ.</p>.<p>ಕೋವಿಡ್ ಕಾರಣದಿಂದ ಶಾಲೆಗಳು ಒಂದೂವರೆ ವರ್ಷದಿಂದ ಬಾಗಿಲು ತೆರೆದಿರಲಿಲ್ಲ. ಹೀಗಾಗಿ ಹಾಸ್ಟೆಲ್ ಕೊರತೆ ಸಮಸ್ಯೆ ಕಾಡಲಿಲ್ಲ. ಈಗ ಶಾಲೆಗಳನ್ನು ಹಂತ ಹಂತವಾಗಿ ತೆರೆಯಲಾಗುತ್ತಿದ್ದು ವಿದ್ಯಾರ್ಥಿ ವಸತಿ ನಿಲಯಗಳ ಅಗತ್ಯವಿದೆ. ಆದರೆ ಇನ್ನೂ ಹಾಸ್ಟೆಲ್ಗಳು ಕಾರ್ಯಾರಂಭ ಮಾಡಿಲ್ಲ.</p>.<p>‘ಹಾಸ್ಟೆಲ್ ಇಲ್ಲದೆ ತರಗತಿಗೆ ಹೋಗಲು ಆಗುತ್ತಿಲ್ಲ. ಇದು ಶಿಕ್ಷಣಕ್ಕೆ ತೊಡಕಾಗುತ್ತಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲಕ್ಕೆ ಹಾಸ್ಟೆಲ್ ಬೇಗ ಆರಂಭಿಸಬೇಕು’ ಎಂದು ವಿದ್ಯಾರ್ಥಿನಿ ಸೌಮ್ಯ ಆರೇರ ಹೇಳಿದರು.</p>.<p>‘ಕೆಲಸ ಸ್ಥಗಿತಗೊಳಿಸಿದ್ದ ಕಂಪನಿಗೆನೋಟಿಸ್ ನೀಡಲಾಗಿತ್ತು. ಅವಧಿಗೆ ಸರಿಯಾಗಿ ಕಾಮಗಾರಿ ನಡೆಸದ ಕಾರಣ ಕಪ್ಪುಪಟ್ಟಿಗೆ ಸೇರಿಸಲು ಪ್ರಸ್ತಾವ ಸಲ್ಲಿಸಿದ್ದೇವೆ. ಬೇರೆ ಕಂಪನಿಗೆ ಟೆಂಡರ್ ನೀಡಲಾಗಿದೆ. ಕೆಲಸ ಶೀಘ್ರ ಮುಗಿಸಲು ಸೂಚಿಸಲಾಗಿದೆ’ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಎಸ್.ಪುರುಷೋತ್ತಮ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>