'ಲಾಕ್ಡೌನ್ ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್ಗೆ ಪಾರ್ಸೆಲ್ ಊಟ ಕೊಡಲು ತೆರೆದಿದ್ದೆವು. ಆಗ ಹತ್ತಿಪ್ಪತ್ತು ಊಟಗಳಿಗೆ ಮಾತ್ರ ಸೀಮಿತವಾಗಿತ್ತು. ಈಗ ಪೂರ್ಣ ಪ್ರಮಾಣದಲ್ಲಿ ಖಾನಾವಳಿ ತೆರೆದರೂ, ನಿರೀಕ್ಷಿತ ವ್ಯಾಪಾರ ನಡೆಯುತ್ತಿಲ್ಲ. ಒಂದು ಕಡೆ ಕಾಳು–ಕಡಿಯ ದರ ಏರಿದೆ, ಮತ್ತೊಂದೆಡೆ ಗ್ರಾಹಕರು ಬರದೆ ಬಾಡಿಗೆ, ಕೂಲಿಯವರ ಸಂಬಳ ಸೇರಿದಂತೆ ಎಲ್ಲದಕ್ಕೂ ಯೋಚಿಸುವಂತೆ ಆಗಿದೆ' ಎನ್ನುತ್ತಾರೆ ಬಸವೇಶ್ವರ ಖಾನಾವಳಿಯ ಸಂಗಮೇಶ ಗೊಟಗೋಡಿ.