<p><strong>ಶಿರಸಿ:</strong> ಅತಿವೃಷ್ಟಿಯಿಂದ ಮನೆ ಕಳೆದುಕೊಂಡವರಿಗೆ ಹೊಸ ಮನೆ ನಿರ್ಮಾಣಕ್ಕೆ ವಸತಿ ಯೋಜನೆಯಡಿ ಆದ್ಯತೆ ಕೊಡಬೇಕು. ಈ ಬಗ್ಗೆ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲಾಗುವುದು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ ಹೇಳಿದರು.</p>.<p>ತಾಲ್ಲೂಕಿನ ನೆರೆಬಾಧಿತ ಪ್ರದೇಶಕ್ಕೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅತಿವೃಷ್ಟಿಯಲ್ಲಿ ಜಮೀನು, ಬೆಳೆ ಕಳೆದುಕೊಳ್ಳುವ ರೈತರಿಗೆ ಗರಿಷ್ಠ ಪರಿಹಾರ ಒದಗಿಸಬೇಕು. ಈಗಿನ ಎನ್.ಡಿ.ಆರ್.ಎಫ್. ಮಾರ್ಗಸೂಚಿಯಡಿ ನೀಡುವ ₹3,800 ಪರಿಹಾರವನ್ನು ₹10 ಸಾವಿರಕ್ಕೆ ಏರಿಕೆ ಮಾಡಬೇಕು’ ಎಂದರು.</p>.<p>‘ನೆರೆ ಸಂತ್ರಸ್ತರಾದವರಿಗೆ ಮನೆ ನಿರ್ಮಾಣಕ್ಕೆ ಎತ್ತರದ ಹಾಗೂ ಸುರಕ್ಷಿತ ಸ್ಥಳದಲ್ಲಿ ಕಡ್ಡಾಯವಾಗಿ ಪರ್ಯಾಯ ಭೂಮಿ ನೀಡಬೇಕು. ಅರಣ್ಯ ಭೂಮಿ ಇದ್ದರೂ ಅದನ್ನು ಸರ್ಕಾರ ಪಡೆದು ಸಂತ್ರಸ್ತರಿಗೆ ನೀಡಲಿ. ಅರಣ್ಯ ಇಲಾಖೆಗೆ ಅದರ ಬದಲು ಪರ್ಯಾಯ ಭೂಮಿ ಕೊಡಲಿ’ ಎಂದರು.</p>.<p>ತಾಲ್ಲೂಕಿನ ರೇವಣಕಟ್ಟಾ ಭಾಗದಲ್ಲಿ, ಸಿದ್ದಾಪುರ ತಾಲ್ಲೂಕಿನ ಹಸರಗೋಡ, ಹಾರ್ಸಿಕಟ್ಟಾ ಭಾಗದ ನೆರೆ ಬಾಧಿತ ಪ್ರದೇಶಕ್ಕೆ ತೆರಳಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಕಾಳಜಿ ಕೇಂದ್ರಕ್ಕೂ ಭೇಟಿ ನೀಡಿದರು.</p>.<p>ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ, ಪ್ರಧಾನ ಕಾರ್ಯದರ್ಶಿ ಎಸ್.ಕೆ.ಭಾಗವತ, ಪ್ರಮುಖರಾದ ದೀಪಕ ದೊಡ್ಡೂರು, ಜಗದೀಶ ಗೌಡ, ಬಸವರಾಜ ದೊಡ್ಮನಿ, ವೆಂಕಟೇಶ ಹೆಗಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ಅತಿವೃಷ್ಟಿಯಿಂದ ಮನೆ ಕಳೆದುಕೊಂಡವರಿಗೆ ಹೊಸ ಮನೆ ನಿರ್ಮಾಣಕ್ಕೆ ವಸತಿ ಯೋಜನೆಯಡಿ ಆದ್ಯತೆ ಕೊಡಬೇಕು. ಈ ಬಗ್ಗೆ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲಾಗುವುದು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ ಹೇಳಿದರು.</p>.<p>ತಾಲ್ಲೂಕಿನ ನೆರೆಬಾಧಿತ ಪ್ರದೇಶಕ್ಕೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅತಿವೃಷ್ಟಿಯಲ್ಲಿ ಜಮೀನು, ಬೆಳೆ ಕಳೆದುಕೊಳ್ಳುವ ರೈತರಿಗೆ ಗರಿಷ್ಠ ಪರಿಹಾರ ಒದಗಿಸಬೇಕು. ಈಗಿನ ಎನ್.ಡಿ.ಆರ್.ಎಫ್. ಮಾರ್ಗಸೂಚಿಯಡಿ ನೀಡುವ ₹3,800 ಪರಿಹಾರವನ್ನು ₹10 ಸಾವಿರಕ್ಕೆ ಏರಿಕೆ ಮಾಡಬೇಕು’ ಎಂದರು.</p>.<p>‘ನೆರೆ ಸಂತ್ರಸ್ತರಾದವರಿಗೆ ಮನೆ ನಿರ್ಮಾಣಕ್ಕೆ ಎತ್ತರದ ಹಾಗೂ ಸುರಕ್ಷಿತ ಸ್ಥಳದಲ್ಲಿ ಕಡ್ಡಾಯವಾಗಿ ಪರ್ಯಾಯ ಭೂಮಿ ನೀಡಬೇಕು. ಅರಣ್ಯ ಭೂಮಿ ಇದ್ದರೂ ಅದನ್ನು ಸರ್ಕಾರ ಪಡೆದು ಸಂತ್ರಸ್ತರಿಗೆ ನೀಡಲಿ. ಅರಣ್ಯ ಇಲಾಖೆಗೆ ಅದರ ಬದಲು ಪರ್ಯಾಯ ಭೂಮಿ ಕೊಡಲಿ’ ಎಂದರು.</p>.<p>ತಾಲ್ಲೂಕಿನ ರೇವಣಕಟ್ಟಾ ಭಾಗದಲ್ಲಿ, ಸಿದ್ದಾಪುರ ತಾಲ್ಲೂಕಿನ ಹಸರಗೋಡ, ಹಾರ್ಸಿಕಟ್ಟಾ ಭಾಗದ ನೆರೆ ಬಾಧಿತ ಪ್ರದೇಶಕ್ಕೆ ತೆರಳಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಕಾಳಜಿ ಕೇಂದ್ರಕ್ಕೂ ಭೇಟಿ ನೀಡಿದರು.</p>.<p>ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ, ಪ್ರಧಾನ ಕಾರ್ಯದರ್ಶಿ ಎಸ್.ಕೆ.ಭಾಗವತ, ಪ್ರಮುಖರಾದ ದೀಪಕ ದೊಡ್ಡೂರು, ಜಗದೀಶ ಗೌಡ, ಬಸವರಾಜ ದೊಡ್ಮನಿ, ವೆಂಕಟೇಶ ಹೆಗಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>