ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಬಗ್ಗೆ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ಅವರ ಏಕ ಸದಸ್ಯ ಆಯೋಗದ ವರದಿಯನ್ನು ಜಾರಿ ಮಾಡಬೇಕು. ಮೀಸಲಾತಿ ಹೆಚ್ಚಳ ಮಾಡುವಂತೆ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಬೆಂಗಳೂರಿನಲ್ಲಿ ನಡೆಸುತ್ತಿರುವ ಧರಣಿಯು ಶುಕ್ರವಾರ 100ನೇ ದಿನ ಪೂರೈಸಿದೆ. ವಿವಿಧ ಸಚಿವರು ಮತ್ತೆ ಮತ್ತೆ ನೆಪಗಳನ್ನು ಹೇಳದೇ ಮೀಸಲಾತಿ ಹೆಚ್ಚಿಸಿ ಆದೇಶಿಸಬೇಕು. ಸಂವಿಧಾನ ಬದ್ಧವಾದ ಹಕ್ಕನ್ನು ಕೊಡಬೇಕು’ ಎಂದು ಆಗ್ರಹಿಸಿದರು.