<p><strong>ಶಿರಸಿ: </strong>ಶಾಂತಿ, ಸಹನೆಯ ಜೀವನ ಪದ್ಧತಿ ಜಗತ್ತಿಗೆ ಹೇಳಿಕೊಟ್ಟ ಭಾರತ ಇಂದು ಪ್ರಬಲವಾಗುತ್ತಿದ್ದು, ಶಕ್ತಿಶಾಲಿ ಸ್ವಾಭಿಮಾನಿ ರಾಷ್ಟ್ರ ಎಂಬ ಸಂದೇಶ ಜಗತ್ತಿಗೆ ತಿಳಿಯಬೇಕು ಎಂದು ಉಪ ವಿಭಾಗಾಧಿಕಾರಿ ಆಕೃತಿ ಬನ್ಸಾಲ್ ಹೇಳಿದರು.</p>.<p>ಮಾರಿಕಾಂಬಾ ಕ್ರೀಡಾಂಗಣದಲ್ಲಿ 75ನೆ ಸ್ವಾತಂತ್ರ್ಯೋತ್ಸವ ದಿನದ ನಿಮಿತ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ‘ಸ್ವಾತಂತ್ರ್ಯಕ್ಕೆ ಹಲವರು ಜೀವನ ತ್ಯಾಗ ಮಾಡಿದ್ದರು. ತ್ಯಾಗಗುಣದ ಹೋರಾಟದಿಂದ ದೊರೆತ ಸ್ವಾತಂತ್ರ್ಯಕ್ಕೆ ಅರ್ಥ ನೀಡಬೇಕು. ಬೇರೆಯವರ ವಿಚಾರ, ಚಿಂತನೆ ಗೌರವಿಸುವ ಗುಣ ಬೆಳೆಯಬೇಕು’ ಎಂದರು.</p>.<p>ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ, ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಉಪಾಧ್ಯಕ್ಷೆ ವೀಣಾ ಶೆಟ್ಟಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ನಂದನ ಸಾಗರ್, ತಹಶೀಲ್ದಾರ್ ಎಂ.ಆರ್.ಕುಲಕರ್ಣಿ, ತಾಲ್ಲೂಕು ಪಂಚಾಯ್ತಿ ಇಓ ಎಫ್.ಜಿ.ಚೆನ್ನಣ್ಣನವರ್, ಡಿಡಿಪಿಐ ದಿವಾಕರ ಶೆಟ್ಟಿ, ಸಪಿಐ ರಾಮಚಂದ್ರ ನಾಯಕ ಇದ್ದರು.</p>.<p class="Subhead"><strong>ಸನ್ಮಾನ:</strong>ಪೌರ ಕಾರ್ಮಿಕ ಅಣ್ಣಪ್ಪ ಶಂಕರ ರಾಜ್, ಶಿರಸಿ ಗ್ರಾಮೀಣ ಠಾಣೆಯ ಚೇತನ ಕುಮಾರ್ ಎ., ಯೋಗ ಶಿಕ್ಷಕಿ ಮಂಗಳಗೌರಿ ಭಟ್ಟ, ಅಂಗನವಾಡಿ ಕಾರ್ಯಕರ್ತೆ ಅರುಣಾ ಶ್ರೀಧರ ಭಟ್, ಪಂಡಿತ ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಗಜಾನನ ಭಟ್ ಅವರನ್ನು ಸನ್ಮಾನಿಸಲಾಯಿತು.</p>.<p class="Subhead"><strong>ವಿವಿಧೆಡೆ ಸ್ವಾತಂತ್ರ್ಯೋತ್ಸವ:</strong>ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ತಾಲ್ಲೂಕಿನ ವಿವಿಧೆಡೆ ಶಾಲೆ, ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ಸಂಭ್ರಮದಿಂದ ನಡೆಸಲಾಯಿತು. ಕೋವಿಡ್ ಸುರಕ್ಷತೆ ಕ್ರಮ ಅನುಸರಿಸಿ ಕಾರ್ಯಕ್ರಮ ಆಯೋಜನೆಗೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ: </strong>ಶಾಂತಿ, ಸಹನೆಯ ಜೀವನ ಪದ್ಧತಿ ಜಗತ್ತಿಗೆ ಹೇಳಿಕೊಟ್ಟ ಭಾರತ ಇಂದು ಪ್ರಬಲವಾಗುತ್ತಿದ್ದು, ಶಕ್ತಿಶಾಲಿ ಸ್ವಾಭಿಮಾನಿ ರಾಷ್ಟ್ರ ಎಂಬ ಸಂದೇಶ ಜಗತ್ತಿಗೆ ತಿಳಿಯಬೇಕು ಎಂದು ಉಪ ವಿಭಾಗಾಧಿಕಾರಿ ಆಕೃತಿ ಬನ್ಸಾಲ್ ಹೇಳಿದರು.</p>.<p>ಮಾರಿಕಾಂಬಾ ಕ್ರೀಡಾಂಗಣದಲ್ಲಿ 75ನೆ ಸ್ವಾತಂತ್ರ್ಯೋತ್ಸವ ದಿನದ ನಿಮಿತ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ‘ಸ್ವಾತಂತ್ರ್ಯಕ್ಕೆ ಹಲವರು ಜೀವನ ತ್ಯಾಗ ಮಾಡಿದ್ದರು. ತ್ಯಾಗಗುಣದ ಹೋರಾಟದಿಂದ ದೊರೆತ ಸ್ವಾತಂತ್ರ್ಯಕ್ಕೆ ಅರ್ಥ ನೀಡಬೇಕು. ಬೇರೆಯವರ ವಿಚಾರ, ಚಿಂತನೆ ಗೌರವಿಸುವ ಗುಣ ಬೆಳೆಯಬೇಕು’ ಎಂದರು.</p>.<p>ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ, ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಉಪಾಧ್ಯಕ್ಷೆ ವೀಣಾ ಶೆಟ್ಟಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ನಂದನ ಸಾಗರ್, ತಹಶೀಲ್ದಾರ್ ಎಂ.ಆರ್.ಕುಲಕರ್ಣಿ, ತಾಲ್ಲೂಕು ಪಂಚಾಯ್ತಿ ಇಓ ಎಫ್.ಜಿ.ಚೆನ್ನಣ್ಣನವರ್, ಡಿಡಿಪಿಐ ದಿವಾಕರ ಶೆಟ್ಟಿ, ಸಪಿಐ ರಾಮಚಂದ್ರ ನಾಯಕ ಇದ್ದರು.</p>.<p class="Subhead"><strong>ಸನ್ಮಾನ:</strong>ಪೌರ ಕಾರ್ಮಿಕ ಅಣ್ಣಪ್ಪ ಶಂಕರ ರಾಜ್, ಶಿರಸಿ ಗ್ರಾಮೀಣ ಠಾಣೆಯ ಚೇತನ ಕುಮಾರ್ ಎ., ಯೋಗ ಶಿಕ್ಷಕಿ ಮಂಗಳಗೌರಿ ಭಟ್ಟ, ಅಂಗನವಾಡಿ ಕಾರ್ಯಕರ್ತೆ ಅರುಣಾ ಶ್ರೀಧರ ಭಟ್, ಪಂಡಿತ ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಗಜಾನನ ಭಟ್ ಅವರನ್ನು ಸನ್ಮಾನಿಸಲಾಯಿತು.</p>.<p class="Subhead"><strong>ವಿವಿಧೆಡೆ ಸ್ವಾತಂತ್ರ್ಯೋತ್ಸವ:</strong>ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ತಾಲ್ಲೂಕಿನ ವಿವಿಧೆಡೆ ಶಾಲೆ, ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ಸಂಭ್ರಮದಿಂದ ನಡೆಸಲಾಯಿತು. ಕೋವಿಡ್ ಸುರಕ್ಷತೆ ಕ್ರಮ ಅನುಸರಿಸಿ ಕಾರ್ಯಕ್ರಮ ಆಯೋಜನೆಗೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>