<p><strong>ಹುನಗುಂದ: </strong>ಪಟ್ಟಣದಲ್ಲಿ ಇಂದಿರಾ ಕ್ಯಾಂಟಿನ್ ಕಟ್ಟಡ ಸಿದ್ಧವಾಗಿ ವರ್ಷ ಕಳೆದರೂ ಇನ್ನೂ ಉದ್ಘಾಟನೆ ಭಾಗ್ಯ ಕಂಡಿಲ್ಲ.</p>.<p>ಪಟ್ಟಣದ ಗುರುಭವನದ ಹತ್ತಿರ ವಾರ್ಡ್ ನಂ. 20 ರಲ್ಲಿ ಇಂದಿರಾ ಕ್ಯಾಂಟಿನ್ ನಿರ್ಮಿಸಲಾಗಿದೆ. ಕಾಮಗಾರಿ ಪೂರ್ಣಗೊಂಡು ವರ್ಷ ಕಳೆದಿದೆ. ಆದರೆ ಅದನ್ನು ಉದ್ಘಾಟಿಸಲು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಆಸಕ್ತಿ ತೋರುತ್ತಿಲ್ಲ ಎಂದು ಹೇಳಲಾಗಿದೆ.</p>.<p>ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ‘ಹಸಿವು ಮುಕ್ತ ಕರ್ನಾಟಕ’ ಯೋಜನೆಯಡಿ ತಾಲ್ಲೂಕಿಗೊಂದು ಇಂದಿರಾ ಕ್ಯಾಂಟಿನ್ಗಳನ್ನು ನಿರ್ಮಿಸಲು ಅವಕಾಶ ಮಾಡಿಕೊಡಲಾಗಿತ್ತು.</p>.<p>ಇದರಲ್ಲಿ ಕಡಿಮೆ ದರದಲ್ಲಿ ಸಾರ್ವಜನಿಕರಿಗೆ ಊಟೋಪಹಾರ ನೀಡಲಾಗುತ್ತಿದೆ. ಬೆಳಿಗ್ಗೆ ₹5ಕ್ಕೆ ತಿಂಡಿ, ಮಧ್ಯಾಹ್ನ ಮತ್ತು ರಾತ್ರಿ ₹10ಕ್ಕೆ ಊಟ ಒದಗಿಸಲಾಗುತ್ತದೆ. ಈಗಾಗಲೇ ಜಿಲ್ಲಾ ಕೇಂದ್ರ ಬಾಗಲಕೋಟೆ, ಸಿದ್ದರಾಮಯ್ಯ ಪ್ರತಿನಿಧಿಸುವ ಬಾದಾಮಿಯಲ್ಲಿ ಇಂದಿರಾ ಕ್ಯಾಂಟಿನ್ಗೆ ಚಾಲನೆ ದೊರೆತಿದೆ. ಕೋವಿಡ್–19 ಲಾಕ್ಡೌನ್ ಸಂದರ್ಭದಲ್ಲಿ ಹಸಿದವರ ಹೊಟ್ಟೆ ತುಂಬಿಸಿ ಇಂದಿರಾ ಕ್ಯಾಂಟಿನ್ ಛಾಪು ಮೂಡಿಸಿವೆ.</p>.<p>ಈ ಬಗ್ಗೆ ’ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಪುರಸಭೆ ಮುಖ್ಯಾಧಿಕಾರಿ ಐ.ಕೆ.ಗುಡದಾರಿ, ಲಾಕ್ಡೌನ್ ಜಾರಿಯಲ್ಲಿದ್ದರಿಂದ ವಿಳಂಬವಾಗಿದೆ. ಅಡುಗೆ ಕೋಣೆಯಲ್ಲಿ ಯಂತ್ರೋಪಕರಣ ಜೋಡಿಸುವವರು ಹೈದರಾಬಾದ್ನಿಂದ ಬರಬೇಕಿದೆ. ಅವರು ಬಂದ ನಂತರ ಕ್ಯಾಂಟಿನ್ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.</p>.<p>ಇಂದಿರಾ ಕ್ಯಾಂಟಿನ್ ನಿರ್ಮಿಸಿರುವ ಜಾಗ ಆಯಕಟ್ಟಿನಲ್ಲಿದೆ. ಪ್ರತಿ ನಿತ್ಯ ಕೆಲಸ–ಕಾರ್ಯಗಳ ನಿಮಿತ್ತ ಪಟ್ಟಣಕ್ಕೆ ಬರುವವರಿಗೆ ಕ್ಯಾಂಟಿನ್ ಅನುಕೂಲಕರವಾಗಿದೆ. ಸಂಬಂಧಪಟ್ಟವರು ಆದಷ್ಟು ಶೀಘ್ರ ಕ್ಯಾಂಟಿನ್ ಆರಂಭಿಸಲಿ ಎಂದುಸ್ಥಳೀಯರಾದ ಸಂಗಮೇಶ ಭಾವಿಕಟ್ಟಿ ಮನವಿ ಮಾಡುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುನಗುಂದ: </strong>ಪಟ್ಟಣದಲ್ಲಿ ಇಂದಿರಾ ಕ್ಯಾಂಟಿನ್ ಕಟ್ಟಡ ಸಿದ್ಧವಾಗಿ ವರ್ಷ ಕಳೆದರೂ ಇನ್ನೂ ಉದ್ಘಾಟನೆ ಭಾಗ್ಯ ಕಂಡಿಲ್ಲ.</p>.<p>ಪಟ್ಟಣದ ಗುರುಭವನದ ಹತ್ತಿರ ವಾರ್ಡ್ ನಂ. 20 ರಲ್ಲಿ ಇಂದಿರಾ ಕ್ಯಾಂಟಿನ್ ನಿರ್ಮಿಸಲಾಗಿದೆ. ಕಾಮಗಾರಿ ಪೂರ್ಣಗೊಂಡು ವರ್ಷ ಕಳೆದಿದೆ. ಆದರೆ ಅದನ್ನು ಉದ್ಘಾಟಿಸಲು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಆಸಕ್ತಿ ತೋರುತ್ತಿಲ್ಲ ಎಂದು ಹೇಳಲಾಗಿದೆ.</p>.<p>ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ‘ಹಸಿವು ಮುಕ್ತ ಕರ್ನಾಟಕ’ ಯೋಜನೆಯಡಿ ತಾಲ್ಲೂಕಿಗೊಂದು ಇಂದಿರಾ ಕ್ಯಾಂಟಿನ್ಗಳನ್ನು ನಿರ್ಮಿಸಲು ಅವಕಾಶ ಮಾಡಿಕೊಡಲಾಗಿತ್ತು.</p>.<p>ಇದರಲ್ಲಿ ಕಡಿಮೆ ದರದಲ್ಲಿ ಸಾರ್ವಜನಿಕರಿಗೆ ಊಟೋಪಹಾರ ನೀಡಲಾಗುತ್ತಿದೆ. ಬೆಳಿಗ್ಗೆ ₹5ಕ್ಕೆ ತಿಂಡಿ, ಮಧ್ಯಾಹ್ನ ಮತ್ತು ರಾತ್ರಿ ₹10ಕ್ಕೆ ಊಟ ಒದಗಿಸಲಾಗುತ್ತದೆ. ಈಗಾಗಲೇ ಜಿಲ್ಲಾ ಕೇಂದ್ರ ಬಾಗಲಕೋಟೆ, ಸಿದ್ದರಾಮಯ್ಯ ಪ್ರತಿನಿಧಿಸುವ ಬಾದಾಮಿಯಲ್ಲಿ ಇಂದಿರಾ ಕ್ಯಾಂಟಿನ್ಗೆ ಚಾಲನೆ ದೊರೆತಿದೆ. ಕೋವಿಡ್–19 ಲಾಕ್ಡೌನ್ ಸಂದರ್ಭದಲ್ಲಿ ಹಸಿದವರ ಹೊಟ್ಟೆ ತುಂಬಿಸಿ ಇಂದಿರಾ ಕ್ಯಾಂಟಿನ್ ಛಾಪು ಮೂಡಿಸಿವೆ.</p>.<p>ಈ ಬಗ್ಗೆ ’ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಪುರಸಭೆ ಮುಖ್ಯಾಧಿಕಾರಿ ಐ.ಕೆ.ಗುಡದಾರಿ, ಲಾಕ್ಡೌನ್ ಜಾರಿಯಲ್ಲಿದ್ದರಿಂದ ವಿಳಂಬವಾಗಿದೆ. ಅಡುಗೆ ಕೋಣೆಯಲ್ಲಿ ಯಂತ್ರೋಪಕರಣ ಜೋಡಿಸುವವರು ಹೈದರಾಬಾದ್ನಿಂದ ಬರಬೇಕಿದೆ. ಅವರು ಬಂದ ನಂತರ ಕ್ಯಾಂಟಿನ್ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.</p>.<p>ಇಂದಿರಾ ಕ್ಯಾಂಟಿನ್ ನಿರ್ಮಿಸಿರುವ ಜಾಗ ಆಯಕಟ್ಟಿನಲ್ಲಿದೆ. ಪ್ರತಿ ನಿತ್ಯ ಕೆಲಸ–ಕಾರ್ಯಗಳ ನಿಮಿತ್ತ ಪಟ್ಟಣಕ್ಕೆ ಬರುವವರಿಗೆ ಕ್ಯಾಂಟಿನ್ ಅನುಕೂಲಕರವಾಗಿದೆ. ಸಂಬಂಧಪಟ್ಟವರು ಆದಷ್ಟು ಶೀಘ್ರ ಕ್ಯಾಂಟಿನ್ ಆರಂಭಿಸಲಿ ಎಂದುಸ್ಥಳೀಯರಾದ ಸಂಗಮೇಶ ಭಾವಿಕಟ್ಟಿ ಮನವಿ ಮಾಡುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>