<p><strong>ಕಾರವಾರ:</strong> ‘ಕೊರೊನಾ ಕಾರಣದಿಂದ ವಿದ್ಯಾರ್ಥಿಗಳು ಒಂದು ವರ್ಷದ ತರಗತಿಗಳನ್ನು ಕಳೆದುಕೊಳ್ಳಲು ಸಿದ್ಧ.ಆದರೆ, ಅವರ ಬದುಕಿಗೆ ತೊಂದರೆ ಉಂಟುಮಾಡಲು ಸರ್ಕಾರವೂ ಸಿದ್ಧವಿಲ್ಲ. ಈಗಿನ ಸಂದಿಗ್ಧ ಸ್ಥಿತಿಯಿಂದಾಗಿ ಸ್ಪಷ್ಟ ನಿರ್ಣಯಕ್ಕೆ ಬರಲು ಸಾಧ್ಯವಾಗುತ್ತಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಹೇಳಿದರು.</p>.<p>ನಗರದ ಕೆಇಬಿ ರಸ್ತೆಯಲ್ಲಿ ನಿರ್ಮಿಸಲಾಗಿರುವ ಇಂದಿರಾ ಕ್ಯಾಂಟೀನ್ ಅನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕೋವಿಡ್ 19 ಈಗ ಜೀವನದ ಒಂದು ಭಾಗವಾಗಿದೆ. ಹಾಗೆಂದು ಎರಡು ಮೂರು ವರ್ಷಗಳ ಕಾಲ ಲಾಕ್ಡೌನ್ ಮುಂದುವರಿಸಲು ಸಾಧ್ಯವಿಲ್ಲ. ನಮ್ಮ ಜೀವಕ್ಕೆ ನಾವೇ ರಕ್ಷಕರು ಎಂಬ ಪಾಠವನ್ನು ಎಲ್ಲರೂ ಅರಿಯಬೇಕಿದೆ.ಎಲ್ಲ ಕೆಲಸವನ್ನೂ ಸರ್ಕಾರವೇ ಮಾಡಲು ಸಾಧ್ಯವಿಲ್ಲ’ ಎಂದರು.</p>.<p>‘ಕೊರೊನಾ ವೈರಸ್ ಸಮುದಾಯಕ್ಕೆ ಹರಡದಂತೆ ನೋಡಿಕೊಳ್ಳುವಲ್ಲಿ ಜಿಲ್ಲೆಯ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಉತ್ತಮವಾಗಿ ಕೆಲಸ ನಿರ್ವಹಿಸಿದ್ದಾರೆ. ಜಿಲ್ಲೆಗೆ ಗೌರವ ತರುವ ರೀತಿಯಲ್ಲಿ ನಿಭಾಯಿಸಿದ್ದಾರೆ’ ಎಂದು ಶ್ಲಾಘಿಸಿದರು.</p>.<p>‘ಬಡವರು ಇಂದಿರಾ ಕ್ಯಾಂಟೀನ್ನ ಪ್ರಯೋಜನವನ್ನು ಹೆಚ್ಚು ಪಡೆದುಕೊಳ್ಳಬೇಕು. ಇಲ್ಲಿ ಶುಚಿತ್ವ, ಆಹಾರದ ಗುಣಮಟ್ಟದಲ್ಲಿ ಕೊರತೆಯಾಗದಂತೆ ನೋಡಿಕೊಳ್ಳುವುದು ನಗರಸಭೆಯ ಜವಾಬ್ದಾರಿ. ಅಲ್ಲದೇ ಸ್ಥಳೀಯ ಜನಪ್ರತಿನಿಧಿಗಳೂ ಗಮನ ಹರಿಸಬೇಕು. ಬಡವರ ಪರವಾದ ಈ ಯೋಜನೆಯನ್ನು ಮುಂದುವರಿಸಲು ಮುಖ್ಯಮಂತ್ರಿ ಹಸಿರು ನಿಶಾನೆ ತೋರಿದ್ದಾರೆ’ ಎಂದು ಹೇಳಿದರು.</p>.<p>ಶಾಸಕಿ ರೂಪಾಲಿ ನಾಯ್ಕ ಮಾತನಾಡಿ, ‘ಕಳೆದ ಬಾರಿ ಸಚಿವರು ಸಭೆ ಕರೆದಿದ್ದಾಗ ಮುಂದಿನ 10 ದಿನಗಳಲ್ಲಿ ಕ್ಯಾಂಟೀನ್ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದ್ದರು. ಇದು ಹಿಂದಿನ ಸರ್ಕಾರದ ಯೋಜನೆಯಾದರೂ ಬಡವರಿಗೆ ಅನುಕೂಲವಾಗಲೆಂದು ಯೋಜನೆ ಮುಂದುವರಿಸಲು ಮುಖ್ಯಮಂತ್ರಿ ಯಡಿಯೂರಪ್ಪಒಪ್ಪಿಗೆ ನೀಡಿದ್ದಾರೆ’ ಎಂದರು.</p>.<p class="Subhead"><strong>ಸ್ವಯಂ ಚಾಲಿತ ಯಂತ್ರ:</strong>ಇಂದಿರಾ ಕ್ಯಾಂಟೀನ್ನ ₹ 75 ಲಕ್ಷ ವೆಚ್ಚದ ಕಟ್ಟಡದಲ್ಲಿ ₹ 15 ಲಕ್ಷ ಮೌಲ್ಯದ ಯಂತ್ರೋಪಕರಣಗಳಿವೆ. ತರಕಾರಿ ಹೆಚ್ಚುವುದರಿಂದ ಮೊದಲಾಗಿ ಬೇಯಿಸುವವರೆಗೆ ಎಲ್ಲವೂ ಸ್ವಯಂ ಚಾಲಿತವಾಗಿವೆ. 500 ಜನರಿಗೆ ದಿನವೂ ಮಧ್ಯಾಹ್ನ ₹ 5 ಮತ್ತು ರಾತ್ರಿ ₹ 10ಕ್ಕೆ ಊಟ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಜಯಶ್ರೀ ಮೊಗೇರ, ನಗರಸಭೆಯ ಪ್ರಭಾರ ಆಯುಕ್ತೆಯೂ ಆಗಿರುವ ಉಪ ವಿಭಾಗಾಧಿಕಾರಿ ಪ್ರಿಯಾಂಗಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಅಜ್ಜಯ್ಯ ಇದ್ದರು. ಬಂದರು ಅಧಿಕಾರಿ ಸುರೇಶ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ‘ಕೊರೊನಾ ಕಾರಣದಿಂದ ವಿದ್ಯಾರ್ಥಿಗಳು ಒಂದು ವರ್ಷದ ತರಗತಿಗಳನ್ನು ಕಳೆದುಕೊಳ್ಳಲು ಸಿದ್ಧ.ಆದರೆ, ಅವರ ಬದುಕಿಗೆ ತೊಂದರೆ ಉಂಟುಮಾಡಲು ಸರ್ಕಾರವೂ ಸಿದ್ಧವಿಲ್ಲ. ಈಗಿನ ಸಂದಿಗ್ಧ ಸ್ಥಿತಿಯಿಂದಾಗಿ ಸ್ಪಷ್ಟ ನಿರ್ಣಯಕ್ಕೆ ಬರಲು ಸಾಧ್ಯವಾಗುತ್ತಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಹೇಳಿದರು.</p>.<p>ನಗರದ ಕೆಇಬಿ ರಸ್ತೆಯಲ್ಲಿ ನಿರ್ಮಿಸಲಾಗಿರುವ ಇಂದಿರಾ ಕ್ಯಾಂಟೀನ್ ಅನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕೋವಿಡ್ 19 ಈಗ ಜೀವನದ ಒಂದು ಭಾಗವಾಗಿದೆ. ಹಾಗೆಂದು ಎರಡು ಮೂರು ವರ್ಷಗಳ ಕಾಲ ಲಾಕ್ಡೌನ್ ಮುಂದುವರಿಸಲು ಸಾಧ್ಯವಿಲ್ಲ. ನಮ್ಮ ಜೀವಕ್ಕೆ ನಾವೇ ರಕ್ಷಕರು ಎಂಬ ಪಾಠವನ್ನು ಎಲ್ಲರೂ ಅರಿಯಬೇಕಿದೆ.ಎಲ್ಲ ಕೆಲಸವನ್ನೂ ಸರ್ಕಾರವೇ ಮಾಡಲು ಸಾಧ್ಯವಿಲ್ಲ’ ಎಂದರು.</p>.<p>‘ಕೊರೊನಾ ವೈರಸ್ ಸಮುದಾಯಕ್ಕೆ ಹರಡದಂತೆ ನೋಡಿಕೊಳ್ಳುವಲ್ಲಿ ಜಿಲ್ಲೆಯ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಉತ್ತಮವಾಗಿ ಕೆಲಸ ನಿರ್ವಹಿಸಿದ್ದಾರೆ. ಜಿಲ್ಲೆಗೆ ಗೌರವ ತರುವ ರೀತಿಯಲ್ಲಿ ನಿಭಾಯಿಸಿದ್ದಾರೆ’ ಎಂದು ಶ್ಲಾಘಿಸಿದರು.</p>.<p>‘ಬಡವರು ಇಂದಿರಾ ಕ್ಯಾಂಟೀನ್ನ ಪ್ರಯೋಜನವನ್ನು ಹೆಚ್ಚು ಪಡೆದುಕೊಳ್ಳಬೇಕು. ಇಲ್ಲಿ ಶುಚಿತ್ವ, ಆಹಾರದ ಗುಣಮಟ್ಟದಲ್ಲಿ ಕೊರತೆಯಾಗದಂತೆ ನೋಡಿಕೊಳ್ಳುವುದು ನಗರಸಭೆಯ ಜವಾಬ್ದಾರಿ. ಅಲ್ಲದೇ ಸ್ಥಳೀಯ ಜನಪ್ರತಿನಿಧಿಗಳೂ ಗಮನ ಹರಿಸಬೇಕು. ಬಡವರ ಪರವಾದ ಈ ಯೋಜನೆಯನ್ನು ಮುಂದುವರಿಸಲು ಮುಖ್ಯಮಂತ್ರಿ ಹಸಿರು ನಿಶಾನೆ ತೋರಿದ್ದಾರೆ’ ಎಂದು ಹೇಳಿದರು.</p>.<p>ಶಾಸಕಿ ರೂಪಾಲಿ ನಾಯ್ಕ ಮಾತನಾಡಿ, ‘ಕಳೆದ ಬಾರಿ ಸಚಿವರು ಸಭೆ ಕರೆದಿದ್ದಾಗ ಮುಂದಿನ 10 ದಿನಗಳಲ್ಲಿ ಕ್ಯಾಂಟೀನ್ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದ್ದರು. ಇದು ಹಿಂದಿನ ಸರ್ಕಾರದ ಯೋಜನೆಯಾದರೂ ಬಡವರಿಗೆ ಅನುಕೂಲವಾಗಲೆಂದು ಯೋಜನೆ ಮುಂದುವರಿಸಲು ಮುಖ್ಯಮಂತ್ರಿ ಯಡಿಯೂರಪ್ಪಒಪ್ಪಿಗೆ ನೀಡಿದ್ದಾರೆ’ ಎಂದರು.</p>.<p class="Subhead"><strong>ಸ್ವಯಂ ಚಾಲಿತ ಯಂತ್ರ:</strong>ಇಂದಿರಾ ಕ್ಯಾಂಟೀನ್ನ ₹ 75 ಲಕ್ಷ ವೆಚ್ಚದ ಕಟ್ಟಡದಲ್ಲಿ ₹ 15 ಲಕ್ಷ ಮೌಲ್ಯದ ಯಂತ್ರೋಪಕರಣಗಳಿವೆ. ತರಕಾರಿ ಹೆಚ್ಚುವುದರಿಂದ ಮೊದಲಾಗಿ ಬೇಯಿಸುವವರೆಗೆ ಎಲ್ಲವೂ ಸ್ವಯಂ ಚಾಲಿತವಾಗಿವೆ. 500 ಜನರಿಗೆ ದಿನವೂ ಮಧ್ಯಾಹ್ನ ₹ 5 ಮತ್ತು ರಾತ್ರಿ ₹ 10ಕ್ಕೆ ಊಟ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಜಯಶ್ರೀ ಮೊಗೇರ, ನಗರಸಭೆಯ ಪ್ರಭಾರ ಆಯುಕ್ತೆಯೂ ಆಗಿರುವ ಉಪ ವಿಭಾಗಾಧಿಕಾರಿ ಪ್ರಿಯಾಂಗಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಅಜ್ಜಯ್ಯ ಇದ್ದರು. ಬಂದರು ಅಧಿಕಾರಿ ಸುರೇಶ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>