ಶಿರಸಿ: ತಾಲ್ಲೂಕಿನ ಕಲಕರಡಿ ಗ್ರಾಮದ ಏತನೀರಾವರಿ ಯೋಜನೆ ಉದ್ಘಾಟನೆಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಆಗಮಿಸಿದ್ದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿಂದೆ ಜಲಸಂಪನ್ಮೂಲ ಸಚಿವರಾಗಿದ್ದ ಟಿ.ಬಿ.ಜಯಚಂದ್ರ ಅವರ ಭಾವಚಿತ್ರವಿರುವ ಬ್ಯಾನರ್ಗಳನ್ನು ಗ್ರಾಮದ ರಸ್ತೆಯುದ್ದಕ್ಕೂ ಅಲ್ಲಲ್ಲಿ ಅಳವಡಿಸಿದ್ದರು.