‘ಶಿವರಾಮ ಕಾರಂತ ದೀಪ ಪ್ರಶಸ್ತಿ’ಗೆ ಧಾರವಾಡದ ವಿಶ್ರಾಂತ ಪ್ರಾಧ್ಯಾಪಕಿ ಡಾ.ಶಾಲಿನಿ ರಘುನಾಥ (2020), ಧಾರವಾಡದ ವಿಶ್ರಾಂತ ಪ್ರಾಧ್ಯಾಪಕಿ ಡಾ.ಶಾಂತಾ ಇಮ್ರಾಪುರ (2021) ಹಾಗೂ ಕುಮಟಾದ ಯಕ್ಷಗಾನ ಕಲಾವಿದ ಮೋಹನ ನಾಯಕ ಕೂಜಳ್ಳಿ, ಕರ್ನಾಟಕ ವಿಶ್ವವಿದ್ಯಾಲಯದ ಜಾನಪದ ವಿಭಾಗದ ಅಧ್ಯಕ್ಷ ಡಾ.ವಿ.ಎಲ್.ಪಾಟೀಲ್ (2022) ಅವರನ್ನು ಆಯ್ಕೆ ಮಾಡಲಾಗಿದೆ.