ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ ಮಾತನಾಡಿ,‘ಪಕ್ಷದ ವರಿಷ್ಠರ ಆದೇಶದಂತೆ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಪರ ಪ್ರಚಾರದಲ್ಲಿ ತೊಡಗಿಕೊಳ್ಳುತ್ತಾರೆ’ ಎಂದರು. ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಆರ್.ನಾಯ್ಕ, ಪ್ರಮುಖರಾದ ಜಗದೀಶ ಗೌಡ, ರಮೇಶ ದುಬಾಶಿ, ನಾರಾಯಣ ವೈದ್ಯ, ಕೆ.ಆರ್.ಹೆಗಡೆ ಅಮ್ಮಚ್ಚಿ ಇದ್ದರು. ನಂತರ ಕೊಳಗಿಬೀಸ್ ಗ್ರಾಮದಲ್ಲಿ ಮನೆಮನೆಗೆ ತೆರಳಿ ಮತ ಯಾಚಿಸಲಾಯಿತು.