ಹಕ್ಕಿಗಳ ಕೂಗನ್ನು ಆಧರಿಸಿ ನಿಖರವಾದ ಸಮಯ ಹೇಳುವುದು ಅವರಿಗೆ ಕರತಗವಾಗಿತ್ತು. ಕಾಡಿನಿಂದ ಒಣ ಎಲೆಗಳನ್ನು ತರುವುದನ್ನು ಅವರು ವಿರೋಧಿಸುತ್ತಿದ್ದರು. ಪರಿಸರ ಸಮತೋಲನದಲ್ಲಿ ಉಣುಗು (ಉಣ್ಣಿ), ಉಂಬಳಗಳೂ ಮಹತ್ವದ ಪಾತ್ರ ಹೊಂದಿವೆ, ಅವುಗಳನ್ನು ನಾಶ ಮಾಡಬಾರದು ಎಂದು ತಿಳಿವಳಿಕೆ ಮೂಡಿಸುತ್ತಿದ್ದರು. ಜೇನುನೊಣಗಳ ರಕ್ಷಣೆಗೆ ಹೆಚ್ಚಿನ ಒತ್ತು ನೀಡುತ್ತಿದ್ದರು. 38 ಜಾತಿಯ ಗೆಡ್ಡೆ, ಗೆಣಸುಗಳನ್ನು ಗುರುತಿಸುವುದನ್ನು ಅವರು ಅರಿತಿದ್ದರು.