ಸಂಸ್ಥೆಯು ಪ್ರತಿ ವರ್ಷ ವಿಜ್ಞಾನದಲ್ಲಿ ಸಾಧನೆ ಮಾಡಿದ ದೇಶದ ಇಬ್ಬರು ಶಿಕ್ಷಕರನ್ನು ಗುರುತಿಸಿ ಈ ಪ್ರಶಸ್ತಿ ನೀಡುತ್ತದೆ. ಹಿಂದುಳಿದ ಪ್ರದೇಶದ ವಿದ್ಯಾರ್ಥಿಗಳೇ ಹೆಚ್ಚಾಗಿರುವ ಗಣೇಶನಗರದ ಮಕ್ಕಳನ್ನು ವಿಜ್ಞಾನ ವಸ್ತು ಪ್ರದರ್ಶನಕ್ಕೆ ಅಣಿಗೊಳಿಸಿದ ಕೀರ್ತಿ ಕೆ.ಎಲ್.ಭಟ್ಟ ಅವರದಾಗಿದೆ. ಅವರ ಮಾರ್ಗದರ್ಶನದಲ್ಲಿ ಮಕ್ಕಳು ಸಿದ್ಧಪಡಿಸಿದ ಮಿತ ಮಾಲಿನ್ಯದ ಒಲೆ, ಕೊಳವೆ ಕಾಂಪೋಸ್ಟ್, ನಾವೀನ್ಯ ನಂದಾದೀಪ ಮಾದರಿಗಳು ರಾಷ್ಟ್ರ ಮಟ್ಟದ ಬಹುಮಾನ ಪಡೆದಿದ್ದವು.