‘ಬೆಂಗಳೂರು ವಿಶ್ವ ವಿದ್ಯಾಲಯದ ವಿಷಯ ತಜ್ಞ ಪಿ.ವಿಷ್ಣು ಕಾಮತ್, ಪರಿಸರ ತಜ್ಞ ಹಾಗೂ ವಿಜ್ಞಾನ ಲೇಖಕ ನಾಗೇಶ ಹೆಗಡೆ, ಅಣುವಿದ್ಯುತ್ ತಜ್ಞ ವೈ.ಬಿ.ರಾಮಕೃಷ್ಣ, ಭಾರತೀಯ ವಿಜ್ಞಾನ ಮಂದಿರದ ಟಿ.ವಿ.ರಾಮಚಂದ್ರ, ಇಂಧನ ತಜ್ಞ ಶಂಕರ ಶರ್ಮಾ, ಪಶ್ಚಿಮ ಘಟ್ಟ ಉಳಿಸಿ ಅಭಿಯಾನದ ಸಂಚಾಲಕ ಬಿ.ಎಂ.ಕುಮಾರಸ್ವಾಮಿ ಮುಂತಾದ ಗಣ್ಯರು ಉಪಸ್ಥಿತರಿರಲಿದ್ದಾರೆ. ಪಕ್ಷಾತೀತವಾಗಿ ಎಲ್ಲ ರಾಜಕೀಯ ಮುಖಂಡರು ಪಾಲ್ಗೊಳ್ಳುತ್ತಾರೆ ಎಂಬ ಭರವಸೆಯಿದೆ. ಪರಿಸರವಾದಿಗಳು, ನ್ಯಾಯವಾದಿಗಳು, ಸಾಹಿತಿಗಳು, ವಿವಿಧ ಸಂಘಟನೆಗಳ ಕಾರ್ಯಕರ್ತರುಭಾಗಿಯಾಗಲಿದ್ದಾರೆ’ ಎಂದರು.