ಕಳಚೆಯಲ್ಲಿ ಮತ್ತೆ ಭೂ ಕುಸಿತವಾಗಿರುವ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿವೃತ್ತ ಹಿರಿಯ ವಿಜ್ಞಾನಿ ಡಾ.ಜಿ.ವಿ.ಹೆಗಡೆ, ‘ಹಳ್ಳದ ಕಡೆ ಇಳಿಜಾರಿನಲ್ಲಿ, ಮೇಲೆ ಕಾಲುವೆ ಮೂಲಕ ನೀರು ಹರಿಸಿದ್ದು, ಕೆಳಗೆ ಹಳ್ಳ ಇರುವ ಕಾರಣ ಮಣ್ಣು ಒದ್ದೆಯಾಗಿದೆ. ಇಂಥ ಕಡೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ’ ಎಂದು ತಿಳಿಸಿದ್ದಾರೆ.