ಪಡುಬಿದ್ರಿ ಪೇಟೆ ಭಾಗದಲ್ಲಿ ಸಾಕಷ್ಟು ಕಾಮಗಾರಿಗಳು ಅಪೂರ್ಣವಾಗಿವೆ. ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನಕ್ಕೆ ಸಂಪರ್ಕಿಸುವ ರಸ್ತೆ ಭಾಗದಲ್ಲಿ ಚರಂಡಿ ಸಹಿತ ಸರ್ವಿಸ್ ರಸ್ತೆ ಅಪೂರ್ಣವಾಗಿದೆ. ಬಸ್ ನಿಲ್ದಾಣ, ಆಟೊರಿಕ್ಷಾ, ಟೂರಿಸ್ಟ್ ಕಾರು, ಟೆಂಪೊ ನಿಲುಗಡೆಗೂ ಸೂಕ್ತ ನಿಲ್ದಾಣಗಳ ನಿರ್ಮಾಣ ಇನ್ನಷ್ಟೇ ಆಗಬೇಕಾಗಿದೆ. ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.