<p><strong>ಕಾರವಾರ:</strong> ರಾಜ್ಯ ಮುಖ್ಯ ಚುನಾವಣಾಧಿಕಾರಿ ಡಾ.ಸಂಜೀವ ಕುಮಾರ್ ಅವರು ಹಳಿಯಾಳ ತಾಲ್ಲೂಕಿನ ಸಾಂಬ್ರಾಣಿ ಹೋಬಳಿಯ ಗರಡೊಳ್ಳಿಗೆ ಮಂಗಳವಾರ ಭೇಟಿ ನೀಡಿದರು. ಬುಡಕಟ್ಟು ಸಮುದಾಯದ ಜನರೇ ಅಧಿಕವಿರುವ ಈ ಗ್ರಾಮದಲ್ಲಿ ಮತದಾರರ ಪಟ್ಟಿಯಲ್ಲಿ ಗ್ರಾಮಸ್ಥರ ಹೆಸರು ಸೇರ್ಪಡೆಯ ಬಗ್ಗೆ ಪರಿಶೀಲಿಸಿದರು.</p>.<p>ಗ್ರಾಮಸ್ಥರೊಂದಿಗೆ ಸಂವಾದ ನಡೆಸಿದ ಬಳಿಕ ಅವರ ಅಹವಾಲುಗಳನ್ನು ಸ್ವೀಕರಿಸಿದರು. ಯುವ ಮತದಾರರ ಹೆಸರು ನೋಂದಣಿ, ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿದ್ದವರ ಸೇರ್ಪಡೆ ಮುಂತಾದ ಎಲ್ಲ ಅಂಶಗಳನ್ನು ಖುದ್ದು ಕೂಲಂಕಷವಾಗಿ ವಿಚಾರಿಸಿದರು.</p>.<p>ಇದೇವೇಳೆ ಗ್ರಾಮಸ್ಥರೊಂದಿಗೆ ಮಾತನಾಡಿದ ಅವರು ಮತದಾನದ ಬಗ್ಗೆ ಜನರಿಗೆ ತಿಳಿವಳಿಕೆ ಹಾಗೂ ಚುನಾವಣೆಯ ಮಹತ್ವವನ್ನು ವಿವರಿಸಿದರು.</p>.<p>‘ತಾವು ಬುಡಕಟ್ಟು ಜನಾಂಗಕ್ಕೆ ಸೇರಿದ್ದೀರಿ. ಮತದಾನ ಪ್ರಕ್ರಿಯೆಯಲ್ಲಿ ಎಲ್ಲರಂತೆ ಭಾಗವಹಿಸಲು ತಮಗೂ ಹಕ್ಕಿದೆ. ಈ ಮೂಲಕ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯುವ ಕೆಲಸ ತಮ್ಮಿಂದಲೂ ಆಗಬೇಕು. ಇದರ ಅರಿವು ಮೂಡಿಸುವ ಕಾರಣದಿಂದಲೇ ನಾನು ಈ ಹಳ್ಳಿಗೆ ಭೇಟಿ ನೀಡಿದ್ದೇನೆ. ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಪ್ರಕ್ರಿಯೆಯನ್ನು ಪರಿಶೀಲಿಸಿದ್ದೇನೆ’ ಎಂದರು.</p>.<p class="Subhead"><strong>ಬುಡಕಟ್ಟು ಜನರೇ ಅಧಿಕ</strong></p>.<p>ಹಳಿಯಾಳ ತಾಲೂಕಿನ ಗರಡೊಳ್ಳಿ ಗ್ರಾಮದಲ್ಲಿ ಸುಮಾರು 80 ಮನೆಗಳಿದ್ದು, ಬುಡಕಟ್ಟು ಸಮುದಾಯದವರೇ ಪ್ರಮುಖರಾಗಿದ್ದಾರೆ. ಗ್ರಾಮದಲ್ಲಿ 150ಕ್ಕೂ ಅಧಿಕ ಮತದಾರರಿದ್ದಾರೆ. ಈ ರೀತಿ ಹಿಂದುಳಿದ ಪ್ರದೇಶಕ್ಕೆ ಮುಖ್ಯ ಚುನಾವಣಾಧಿಕಾರಿ ಮೊದಲ ಬಾರಿಗೆ ಭೇಟಿ ನೀಡಿದರು. ಅಲ್ಲದೇ ಮತದಾರರ ಪಟ್ಟಿ ಮತ್ತು ಚುನಾವಣೆಯ ಬಗ್ಗೆ ಜನಜಾಗೃತಿ ಮೂಡಿಸಿದ್ದು ವಿಶೇಷವಾಗಿದೆ.</p>.<p>ಜಿಲ್ಲಾಧಿಕಾರಿ ಡಾ.ಕೆ.ಹರೀಶ ಕುಮಾರ್, ಉಪ ವಿಭಾಗಾಧಿಕಾರಿ ವಿದ್ಯಾಶ್ರೀ ಚಂದರಗಿ ಮತ್ತು ಕಂದಾಯ ಇಲಾಖೆಯ ಸಿಬ್ಬಂದಿ ಕೂಡ ಸ್ಥಳದಲ್ಲಿ ಹಾಜರಿದ್ದು,ಮುಖ್ಯ ಚುನಾವಣಾಧಿಕಾರಿಗೆ ಮಾಹಿತಿ ನೀಡಿದರು. ಗ್ರಾಮಕ್ಕೆ ಅಧಿಕಾರಿಗಳು ಭೇಟಿ ನೀಡಿದಾಗ ಗ್ರಾಮಸ್ಥರು ಸಾಂಪ್ರದಾಯಿಕವಾಗಿ ಸ್ವಾಗತಿಸಿದರು.</p>.<p>––––</p>.<p>* ಯಾವುದೇ ಕಾರಣಕ್ಕೂ ಮತದಾನ ಪ್ರಕ್ರಿಯೆಯಿಂದ ಹಿಂದುಳಿಯದೇ ಸಕ್ರಿಯವಾಗಿ ಭಾಗವಹಿಸಿ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಇದು ನಮ್ಮ ಆಶಯವೂ ಆಗಿದೆ.</p>.<p>– ಡಾ.ಸಂಜೀವ ಕುಮಾರ್, ರಾಜ್ಯ ಮುಖ್ಯ ಚುನಾವಣಾಧಿಕಾರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ರಾಜ್ಯ ಮುಖ್ಯ ಚುನಾವಣಾಧಿಕಾರಿ ಡಾ.ಸಂಜೀವ ಕುಮಾರ್ ಅವರು ಹಳಿಯಾಳ ತಾಲ್ಲೂಕಿನ ಸಾಂಬ್ರಾಣಿ ಹೋಬಳಿಯ ಗರಡೊಳ್ಳಿಗೆ ಮಂಗಳವಾರ ಭೇಟಿ ನೀಡಿದರು. ಬುಡಕಟ್ಟು ಸಮುದಾಯದ ಜನರೇ ಅಧಿಕವಿರುವ ಈ ಗ್ರಾಮದಲ್ಲಿ ಮತದಾರರ ಪಟ್ಟಿಯಲ್ಲಿ ಗ್ರಾಮಸ್ಥರ ಹೆಸರು ಸೇರ್ಪಡೆಯ ಬಗ್ಗೆ ಪರಿಶೀಲಿಸಿದರು.</p>.<p>ಗ್ರಾಮಸ್ಥರೊಂದಿಗೆ ಸಂವಾದ ನಡೆಸಿದ ಬಳಿಕ ಅವರ ಅಹವಾಲುಗಳನ್ನು ಸ್ವೀಕರಿಸಿದರು. ಯುವ ಮತದಾರರ ಹೆಸರು ನೋಂದಣಿ, ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿದ್ದವರ ಸೇರ್ಪಡೆ ಮುಂತಾದ ಎಲ್ಲ ಅಂಶಗಳನ್ನು ಖುದ್ದು ಕೂಲಂಕಷವಾಗಿ ವಿಚಾರಿಸಿದರು.</p>.<p>ಇದೇವೇಳೆ ಗ್ರಾಮಸ್ಥರೊಂದಿಗೆ ಮಾತನಾಡಿದ ಅವರು ಮತದಾನದ ಬಗ್ಗೆ ಜನರಿಗೆ ತಿಳಿವಳಿಕೆ ಹಾಗೂ ಚುನಾವಣೆಯ ಮಹತ್ವವನ್ನು ವಿವರಿಸಿದರು.</p>.<p>‘ತಾವು ಬುಡಕಟ್ಟು ಜನಾಂಗಕ್ಕೆ ಸೇರಿದ್ದೀರಿ. ಮತದಾನ ಪ್ರಕ್ರಿಯೆಯಲ್ಲಿ ಎಲ್ಲರಂತೆ ಭಾಗವಹಿಸಲು ತಮಗೂ ಹಕ್ಕಿದೆ. ಈ ಮೂಲಕ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯುವ ಕೆಲಸ ತಮ್ಮಿಂದಲೂ ಆಗಬೇಕು. ಇದರ ಅರಿವು ಮೂಡಿಸುವ ಕಾರಣದಿಂದಲೇ ನಾನು ಈ ಹಳ್ಳಿಗೆ ಭೇಟಿ ನೀಡಿದ್ದೇನೆ. ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಪ್ರಕ್ರಿಯೆಯನ್ನು ಪರಿಶೀಲಿಸಿದ್ದೇನೆ’ ಎಂದರು.</p>.<p class="Subhead"><strong>ಬುಡಕಟ್ಟು ಜನರೇ ಅಧಿಕ</strong></p>.<p>ಹಳಿಯಾಳ ತಾಲೂಕಿನ ಗರಡೊಳ್ಳಿ ಗ್ರಾಮದಲ್ಲಿ ಸುಮಾರು 80 ಮನೆಗಳಿದ್ದು, ಬುಡಕಟ್ಟು ಸಮುದಾಯದವರೇ ಪ್ರಮುಖರಾಗಿದ್ದಾರೆ. ಗ್ರಾಮದಲ್ಲಿ 150ಕ್ಕೂ ಅಧಿಕ ಮತದಾರರಿದ್ದಾರೆ. ಈ ರೀತಿ ಹಿಂದುಳಿದ ಪ್ರದೇಶಕ್ಕೆ ಮುಖ್ಯ ಚುನಾವಣಾಧಿಕಾರಿ ಮೊದಲ ಬಾರಿಗೆ ಭೇಟಿ ನೀಡಿದರು. ಅಲ್ಲದೇ ಮತದಾರರ ಪಟ್ಟಿ ಮತ್ತು ಚುನಾವಣೆಯ ಬಗ್ಗೆ ಜನಜಾಗೃತಿ ಮೂಡಿಸಿದ್ದು ವಿಶೇಷವಾಗಿದೆ.</p>.<p>ಜಿಲ್ಲಾಧಿಕಾರಿ ಡಾ.ಕೆ.ಹರೀಶ ಕುಮಾರ್, ಉಪ ವಿಭಾಗಾಧಿಕಾರಿ ವಿದ್ಯಾಶ್ರೀ ಚಂದರಗಿ ಮತ್ತು ಕಂದಾಯ ಇಲಾಖೆಯ ಸಿಬ್ಬಂದಿ ಕೂಡ ಸ್ಥಳದಲ್ಲಿ ಹಾಜರಿದ್ದು,ಮುಖ್ಯ ಚುನಾವಣಾಧಿಕಾರಿಗೆ ಮಾಹಿತಿ ನೀಡಿದರು. ಗ್ರಾಮಕ್ಕೆ ಅಧಿಕಾರಿಗಳು ಭೇಟಿ ನೀಡಿದಾಗ ಗ್ರಾಮಸ್ಥರು ಸಾಂಪ್ರದಾಯಿಕವಾಗಿ ಸ್ವಾಗತಿಸಿದರು.</p>.<p>––––</p>.<p>* ಯಾವುದೇ ಕಾರಣಕ್ಕೂ ಮತದಾನ ಪ್ರಕ್ರಿಯೆಯಿಂದ ಹಿಂದುಳಿಯದೇ ಸಕ್ರಿಯವಾಗಿ ಭಾಗವಹಿಸಿ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಇದು ನಮ್ಮ ಆಶಯವೂ ಆಗಿದೆ.</p>.<p>– ಡಾ.ಸಂಜೀವ ಕುಮಾರ್, ರಾಜ್ಯ ಮುಖ್ಯ ಚುನಾವಣಾಧಿಕಾರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>