ಮುಂಡಗೋಡ (ಉತ್ತರ ಕನ್ನಡ): ತಾಲ್ಲೂಕಿನ ಚಿಗಳ್ಳಿ ಜಲಾಶಯದ ಎಡದಂಡೆ ಕಾಲುವೆ ಹತ್ತಿರ ಒಡ್ಡು ಕುಸಿದು ಅಪಾರ ಪ್ರಮಾಣದಲ್ಲಿ ನೀರು ಗದ್ದೆಗಳಿಗೆ ನುಗ್ಗಿದೆ.
ಈ ಜಲಾಶಯ 2009ರಲ್ಲಿ ಒಡೆದಿತ್ತು. ಅದರ ನಂತರ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ದುರಸ್ತಿ ಕಾರ್ಯ ಕೈಗೊಳ್ಳಲಾಗಿತ್ತು. ಸ್ಥಳಕ್ಕೆ ತಹಶೀಲ್ದಾರ್ ಶ್ರೀಧರ ಮುಂದಲಮನಿ, ಸಿಪಿಐ ಶಿವಾನಂದ ಚಲವಾದಿ ಭೇಟಿ ನೀಡಿ, ದಡಪಾತ್ರದ ಗ್ರಾಮಸ್ಥರನ್ನು ಸ್ಥಳಾಂತರಿಸುತ್ತಿದ್ದಾರೆ.