ಶಿರಸಿ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡ, ಜೊಯಿಡಾ, ಕಾರವಾರ, ಕುಮಟಾ ತಾಲ್ಲೂಕುಗಳಲ್ಲಿ ಹೆದ್ದಾರಿ ಮತ್ತು ಜಿಲ್ಲಾ ಪ್ರಮುಖ ರಸ್ತೆಗಳಿಗೆ ಅತಿ ಹೆಚ್ಚು ಹಾನಿಯಾಗಿದೆ. ಘಟ್ಟ ಪ್ರದೇಶದಲ್ಲಿ ಸಾಗುವ ಹೆದ್ದಾರಿಗಳಲ್ಲಂತೂ ದೊಡ್ಡ ದೊಡ್ಡ ಹೊಂಡಗಳಾಗಿ ವಾಹನ ಸಂಚಾರ ದುಸ್ತರವಾಗಿದೆ. ಚಾಲಕರಿಗೆ ಒಂದು ರೀತಿಯ ಸವಾಲಾದರೆ, ಪ್ರಯಾಣಿಕರಿಗೆ ಗಟ್ಟಿಯಾಗಿ ಹಿಡಿದುಕೊಂಡುಕುಳಿತುಕೊಳ್ಳುವುದೇ ದೊಡ್ಡ ಸಮಸ್ಯೆಯಾಗಿದೆ.