ರಾಷ್ಟ್ರೀಯ ಹೆದ್ದಾರಿ 66ರ ಮೂಲಕ ನಗರ ಪ್ರವೇಶಿಸುವ ಸ್ಥಳಗಳಾದ ಬೈತಖೋಲ್, ಕೋಡಿಬಾಗ್ನಲ್ಲಿ ಕಾಳಿ ನದಿ ಸೇತುವೆ ಬಳಿ ಹಾಗೂ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಬೆಳಿಗ್ಗೆ 6ರಿಂದಲೇ ಪೊಲೀಸರು ಕಾರ್ಯಾಚರಣೆ ನಡೆಸಿದರು. ವಾಹನಗಳನ್ನು ನಿಲ್ಲಿಸುವಂತೆ ಸೂಚಿಸಿ ಕೂಲಂಕಷವಾಗಿ ಪರಿಶೀಲಿಸಿದರು. ಇಲಾಖೆಯ ಹಿರಿಯ ಅಧಿಕಾರಿಗಳು ಗಸ್ತು ಸಂಚರಿಸಿ ಉಸ್ತುವಾರಿ ನೋಡಿದರು.