'ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆಯು ಸಹಜ ಪ್ರಕ್ರಿಯೆ. ಮುಖ್ಯಮಂತ್ರಿ ತಮ್ಮ ವಿವೇಚನೆಯಂತೆ ಜಿಲ್ಲೆಗಳ ಉಸ್ತುವಾರಿ ನೀಡಿದ್ದಾರೆ. ಉಸ್ತುವಾರಿ ಸಚಿವರು ತವರು ಜಿಲ್ಲೆಯವರೇ ಆಗಬೇಕು ಎಂದಿಲ್ಲ. ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯಕರು ಇರುತ್ತಾರೆ. ವಾರಕ್ಕೊಮ್ಮೆ ಭೇಟಿ ನೀಡಲು ಪ್ರಯತ್ನಿಸುವೆ. ಮೂರು ತಿಂಗಳಿಗೊಮ್ಮೆ ಪ್ರಗತಿ ಪರಿಶೀಲನಾ ಸಭೆ ಹಮ್ಮಿಕೊಂಡು ಜಿಲ್ಲೆಯ ಅಭಿವೃದ್ಧಿಯನ್ನು ನೋಡಿಕೊಳ್ಳಲಾಗುವುದು' ಎಂದರು.