<p><strong>ಶಿರಸಿ:</strong> ಕಳೆದ ಇಪ್ಪತ್ನಾಲ್ಕು ತಾಸುಗಳ ಅವಧಿಯಲ್ಲಿ ತಾಲ್ಲೂಕಿನಲ್ಲಿ 24 ಸೆಂ.ಮೀ. ಮಳೆ ಸುರಿದಿದೆ. ನದಿ, ಕೊಳ್ಳಗಳು ಭರ್ತಿಯಾಗಿದ್ದು ಹಲವೆಡೆ ತೋಟ, ಗದ್ದೆಗಳು ಜಲಾವೃತಗೊಂಡಿವೆ.</p>.<p>ಮಾದ್ನಕಳ್, ಮಾರಿಗದ್ದೆ, ಸರಕುಳಿ ಸೇತುವೆಗಳ ಮೇಲೆ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ಶಿರಸಿ ಹಾಗೂ ಸಿದ್ದಾಪುರ ತಾಲ್ಲೂಕುಗಳ ನಡುವಿನ ಸಂಪರ್ಕ ಸ್ಥಗಿತಗೊಂಡಿದೆ. ಪಟ್ಟಣಹೊಳೆ, ಕೆಂಗ್ರೆ ಹೊಳೆಯೂ ಭರ್ತಿಯಾಗಿದ್ದು ಸೇತುವೆಗಳು ಸಂಪೂರ್ಣ ಮುಚ್ಚಿವೆ. ಸಂಚಾರ ಸ್ಥಗಿತಗೊಂಡಿದೆ.</p>.<p>ಕಕ್ಕಳ್ಳಿ-ವಾನಳ್ಳಿ ನಡುವಿನ ರಸ್ತೆಯಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ಹಲವೆಡೆ ಮರಗಳು ರಸ್ತೆಗೆ ಉರುಳಿ ಬಿದ್ದಿವೆ. ನೂರಾರು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಗ್ರಾಮೀಣ ಭಾಗದ ಬಹುತೇಕ ಕಡೆಗಳಲ್ಲಿ ವಿದ್ಯುತ್, ದೂರವಾಣಿ ಸಂಪರ್ಕ ಕಡಿತಗೊಂಡಿದೆ.</p>.<p>ಶಿವಳ್ಳಿ ಗ್ರಾಮ ಪಂಚಾಯ್ತಿಯ ಚಿಂಚಳಿಕೆ ಗ್ರಾಮದಲ್ಲಿ ಕೆರೆ ಒಡ್ಡು ಒಡೆದ ಪರಿಣಾಮ 60 ಎಕರೆಗೂ ಹೆಚ್ಚು ಭತ್ತದ ಗದ್ದೆ ಮುಳುಗಡೆಯಾಗಿದೆ. ನಾಟಿಗೆ ಸಿದ್ಧಪಡಿಸಿಟ್ಟುಕೊಂಡಿದ್ದ ಭತ್ತದ ಸಸಿಗಳು ತೇಲಿಹೋಗಿವೆ.</p>.<p>ಶಿರಸಿ ನಗರದ ತಗ್ಗು ಪ್ರದೇಶಗಳೆಲ್ಲ ಜಲಾವೃತಗೊಂಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ಕಳೆದ ಇಪ್ಪತ್ನಾಲ್ಕು ತಾಸುಗಳ ಅವಧಿಯಲ್ಲಿ ತಾಲ್ಲೂಕಿನಲ್ಲಿ 24 ಸೆಂ.ಮೀ. ಮಳೆ ಸುರಿದಿದೆ. ನದಿ, ಕೊಳ್ಳಗಳು ಭರ್ತಿಯಾಗಿದ್ದು ಹಲವೆಡೆ ತೋಟ, ಗದ್ದೆಗಳು ಜಲಾವೃತಗೊಂಡಿವೆ.</p>.<p>ಮಾದ್ನಕಳ್, ಮಾರಿಗದ್ದೆ, ಸರಕುಳಿ ಸೇತುವೆಗಳ ಮೇಲೆ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ಶಿರಸಿ ಹಾಗೂ ಸಿದ್ದಾಪುರ ತಾಲ್ಲೂಕುಗಳ ನಡುವಿನ ಸಂಪರ್ಕ ಸ್ಥಗಿತಗೊಂಡಿದೆ. ಪಟ್ಟಣಹೊಳೆ, ಕೆಂಗ್ರೆ ಹೊಳೆಯೂ ಭರ್ತಿಯಾಗಿದ್ದು ಸೇತುವೆಗಳು ಸಂಪೂರ್ಣ ಮುಚ್ಚಿವೆ. ಸಂಚಾರ ಸ್ಥಗಿತಗೊಂಡಿದೆ.</p>.<p>ಕಕ್ಕಳ್ಳಿ-ವಾನಳ್ಳಿ ನಡುವಿನ ರಸ್ತೆಯಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ಹಲವೆಡೆ ಮರಗಳು ರಸ್ತೆಗೆ ಉರುಳಿ ಬಿದ್ದಿವೆ. ನೂರಾರು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಗ್ರಾಮೀಣ ಭಾಗದ ಬಹುತೇಕ ಕಡೆಗಳಲ್ಲಿ ವಿದ್ಯುತ್, ದೂರವಾಣಿ ಸಂಪರ್ಕ ಕಡಿತಗೊಂಡಿದೆ.</p>.<p>ಶಿವಳ್ಳಿ ಗ್ರಾಮ ಪಂಚಾಯ್ತಿಯ ಚಿಂಚಳಿಕೆ ಗ್ರಾಮದಲ್ಲಿ ಕೆರೆ ಒಡ್ಡು ಒಡೆದ ಪರಿಣಾಮ 60 ಎಕರೆಗೂ ಹೆಚ್ಚು ಭತ್ತದ ಗದ್ದೆ ಮುಳುಗಡೆಯಾಗಿದೆ. ನಾಟಿಗೆ ಸಿದ್ಧಪಡಿಸಿಟ್ಟುಕೊಂಡಿದ್ದ ಭತ್ತದ ಸಸಿಗಳು ತೇಲಿಹೋಗಿವೆ.</p>.<p>ಶಿರಸಿ ನಗರದ ತಗ್ಗು ಪ್ರದೇಶಗಳೆಲ್ಲ ಜಲಾವೃತಗೊಂಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>