ಭಟ್ಕಳ ತಾಲ್ಲೂಕಿನ ಚೌಥನಿ ನದಿ ತುಂಬಿದ್ದು, ಸೇತುವೆ ಮುಳುಗಡೆಯಾಗಿದೆ. ಹತ್ತಾರು ಮನೆಗಳಿಗೆ ನೀರು ನುಗ್ಗಿದೆ. ಪಟ್ಟಣದಿಂದ ಪುರವರ್ಗಕ್ಕೆ ಹೋಗುವ ರಸ್ತೆಯಲ್ಲಿ ಸಂಪರ್ಕ ಕಡಿತವಾಗಿದೆ. ರಾಷ್ಟ್ರೀಯ ಹೆದ್ದಾರಿ 66ರ ಅಂಚಿನ ಮಾರುತಿ ನಗರದಲ್ಲಿ ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿಯಾಗಿದೆ. ಸರ್ಪನಕಟ್ಟೆ ಚೆಕ್ ಪೋಸ್ಟ್ ಬಳಿಯ ಹುಲಿದುರ್ಗಿ ದೇವಸ್ಥಾನ ಹತ್ತಿರದ ರಾಷ್ಟ್ರೀಯ ಹೆದ್ದಾರಿಯ ಒಂದು ಬದಿಯಲ್ಲಿ ಗುಡ್ಡ ಕುಸಿದಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.