ಕಾರವಾರ: ಭಟ್ಕಳ ತಾಲ್ಲೂಕಿನಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಮಣ್ಕುಳಿಯ ನಾಗಮಾಸ್ತಿ ನದಿಯ ಸಣ್ಣ ಕಟ್ಟು ಒಡೆದು ಸಮೀಪದ ಕೃಷಿ ಜಮೀನಿಗೆ ನೀರು ನುಗ್ಗಿದೆ. ಗದ್ದೆಗಳಲ್ಲಿ ನಾಟಿ ಮಾಡಲಾಗಿದ್ದ ಭತ್ತದ ಸಸಿಗಳು ಕೊಚ್ಚಿಕೊಂಡು ಹೋಗಿದ್ದು, ರೈತರು ಚಿಂತಿತರಾಗಿದ್ದಾರೆ.
ಕೃಷಿ ಮಾಡಲು ನೀರಿಗಾಗಿ ರೈತರು ನದಿಗೆ ಸಣ್ಣ ಕಟ್ಟುಗಳನ್ನು ನಿರ್ಮಿಸಿಕೊಂಡಿದ್ದರು. ಗುರುವಾರ ರಾತ್ರಿಯಿಂದ ಸುರಿದ ಭಾರಿ ಮಳೆಗೆ ಅವು ಒಡೆದಿವೆ.
ತಾಲ್ಲೂಕಿ ಚೌಥನಿ ನದಿಯಲ್ಲೂ ನೀರಿನ ಪ್ರಮಾಣ ಮತ್ತಷ್ಟು ಏರಿಕೆ ಕಂಡಿದ್ದು, ಸೇತುವೆ ಮುಳುಗಡೆಯಾಗಿದೆ. ಹತ್ತಾರು ಮನೆಗಳಿಗೆ ನೀರು ನುಗ್ಗಿದೆ. ಪಟ್ಟಣದಿಂದ ಪುರವರ್ಗಕ್ಕೆ ಹೋಗುವ ರಸ್ತೆಯಲ್ಲಿ ಸಂಪರ್ಕ ಕಡಿತವಾಗಿದೆ.