<p><strong>ಕಾರವಾರ:</strong> ಮಲೆನಾಡಿನಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಕರಾವಳಿ ತಾಲ್ಲೂಕುಗಳ ಹತ್ತಾರು ಗ್ರಾಮಗಳು ಜಲಾವೃತವಾಗಿವೆ. ಅಂಕೋಲಾ ತಾಲ್ಲೂಕಿನ ಕೂರ್ವೆ ದ್ವೀಪವು ಗಂಗಾವಳಿ ನದಿ ನೀರಿನಿಂದ ಸಂಪೂರ್ಣ ಮುಳುಗಡೆಯಾಗಿದೆ.</p>.<p>ದ್ವೀಪದಲ್ಲಿ ಜನ ವಾಸವಿದ್ದು, ರಕ್ಷಣೆಗೆ ದೋಣಿಗಳ ವ್ಯವಸ್ಥೆ ಮಾಡಲಾಗಿದೆ. ಆದರೆ, ಗಾಳಿ ಮತ್ತು ನೀರಿನ ರಭಸಕ್ಕೆ ದೋಣಿ ಮೇಲೆ ಸಾಗಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದೆ.</p>.<p>ಸುಂಕಸಾಳ, ಡೊಂಗ್ರಿ, ವಾಸರ ಕುದ್ರಿಗೆ, ಮೊಗಟಾ ಬೆಳಸೆ, ಶೆಟಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮಗಳು ಜಲಾವೃತವಾಗಿವೆ. ಸುಂಕಸಾಳದಲ್ಲಿ ರಾಷ್ಟ್ರೀಯ ಹೆದ್ದಾರಿ 63 ಸಂಪೂರ್ಣ ಮುಳುಗಡೆಯಾಗಿದ್ದು, ವಾಹನ ಸಂಚಾರ ಸ್ಥಗಿತವಾಗಿದೆ. ಇದರಿಂದ ಯಲ್ಲಾಪುರದ ಮೂಲಕ ಕರಾವಳಿಗೆ ಸಂಪರ್ಕ ಕಡಿತಗೊಂಡಿದೆ. ಹಾಲು, ತರಕಾರಿ ಪತ್ರಿಕೆಗಳು ಈ ಹೆದ್ದಾರಿಯಲ್ಲೇ ಕರಾವಳಿಗೆ ರವಾನೆಯಾಗುತ್ತವೆ. ಸುಂಕಸಾಳದಲ್ಲಿ ಪೆಟ್ರೋಲ್ ಪಂಪ್ ಮುಳುಗಡೆಯಾಗಿದೆ.</p>.<p>ಕುಮಟಾ ತಾಲ್ಲೂಕಿನಲ್ಲಿ ಅಘನಾಶಿನಿ ನದಿಯು ಉಕ್ಕಿ ಹರಿಯುತ್ತಿದೆ. ಸಮೀಪದ ಕೆಲವು ಮನೆಗಳಿಗೆ, ತೋಟ, ಗದ್ದೆಗಳು ಜಲಾವೃತವಾಗಿವೆ.</p>.<p>ಸಿದ್ದಾಪುರ ತಾಲ್ಲೂಕಿನಲ್ಲಿ ರಭಸದ ಮಳೆ ಮುಂದುವರಿದಿದೆ. ರಾತ್ರಿ ಸ್ವಲ್ಪ ಕಡಿಮೆಯಾಗಿದ್ದ ವರ್ಷಧಾರೆ, ಬೆಳಿಗ್ಗೆ ಪುನಃ ಜೋರಾಗಿದೆ.<br />ಶುಕ್ರವಾರ ಬೆಳಿಗ್ಗೆ 8ಕ್ಕೆ ಮುಕ್ತಾಯಗೊಂಡ 24 ತಾಸುಗಳ ಅವಧಿಯಲ್ಲಿ 23.5 ಸೆಂಟಿಮೀಟರ್ಗಳಷ್ಟು ಭಾರಿ ಮಳೆ ದಾಖಲಾಗಿದೆ. ಸ್ಥಳೀಯ ಹೊಳೆಗಳು ಉಕ್ಕಿ ಹರಿಯುತ್ತಿರುವ ಕಾರಣದಿಂದ ತಾಲ್ಲೂಕಿನ ಹೆಮ್ಮನಬೈಲ್ ಮತ್ತು ಕಲ್ಯಾಣ ಪುರದಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದೆ.</p>.<p>ದಾಂಡೇಲಿಯಲ್ಲೂ ಮಳೆ ಮುಂದುವರಿದಿದ್ದು, ವಿವಿಧ ರಸ್ತೆಗಳಲ್ಲಿ ಸಂಪರ್ಕ ಕಡಿತಗೊಂಡಿದೆ. ಇದರಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಗಳು ಡಿಪೊದಲ್ಲೇ ನಿಂತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ಮಲೆನಾಡಿನಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಕರಾವಳಿ ತಾಲ್ಲೂಕುಗಳ ಹತ್ತಾರು ಗ್ರಾಮಗಳು ಜಲಾವೃತವಾಗಿವೆ. ಅಂಕೋಲಾ ತಾಲ್ಲೂಕಿನ ಕೂರ್ವೆ ದ್ವೀಪವು ಗಂಗಾವಳಿ ನದಿ ನೀರಿನಿಂದ ಸಂಪೂರ್ಣ ಮುಳುಗಡೆಯಾಗಿದೆ.</p>.<p>ದ್ವೀಪದಲ್ಲಿ ಜನ ವಾಸವಿದ್ದು, ರಕ್ಷಣೆಗೆ ದೋಣಿಗಳ ವ್ಯವಸ್ಥೆ ಮಾಡಲಾಗಿದೆ. ಆದರೆ, ಗಾಳಿ ಮತ್ತು ನೀರಿನ ರಭಸಕ್ಕೆ ದೋಣಿ ಮೇಲೆ ಸಾಗಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದೆ.</p>.<p>ಸುಂಕಸಾಳ, ಡೊಂಗ್ರಿ, ವಾಸರ ಕುದ್ರಿಗೆ, ಮೊಗಟಾ ಬೆಳಸೆ, ಶೆಟಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮಗಳು ಜಲಾವೃತವಾಗಿವೆ. ಸುಂಕಸಾಳದಲ್ಲಿ ರಾಷ್ಟ್ರೀಯ ಹೆದ್ದಾರಿ 63 ಸಂಪೂರ್ಣ ಮುಳುಗಡೆಯಾಗಿದ್ದು, ವಾಹನ ಸಂಚಾರ ಸ್ಥಗಿತವಾಗಿದೆ. ಇದರಿಂದ ಯಲ್ಲಾಪುರದ ಮೂಲಕ ಕರಾವಳಿಗೆ ಸಂಪರ್ಕ ಕಡಿತಗೊಂಡಿದೆ. ಹಾಲು, ತರಕಾರಿ ಪತ್ರಿಕೆಗಳು ಈ ಹೆದ್ದಾರಿಯಲ್ಲೇ ಕರಾವಳಿಗೆ ರವಾನೆಯಾಗುತ್ತವೆ. ಸುಂಕಸಾಳದಲ್ಲಿ ಪೆಟ್ರೋಲ್ ಪಂಪ್ ಮುಳುಗಡೆಯಾಗಿದೆ.</p>.<p>ಕುಮಟಾ ತಾಲ್ಲೂಕಿನಲ್ಲಿ ಅಘನಾಶಿನಿ ನದಿಯು ಉಕ್ಕಿ ಹರಿಯುತ್ತಿದೆ. ಸಮೀಪದ ಕೆಲವು ಮನೆಗಳಿಗೆ, ತೋಟ, ಗದ್ದೆಗಳು ಜಲಾವೃತವಾಗಿವೆ.</p>.<p>ಸಿದ್ದಾಪುರ ತಾಲ್ಲೂಕಿನಲ್ಲಿ ರಭಸದ ಮಳೆ ಮುಂದುವರಿದಿದೆ. ರಾತ್ರಿ ಸ್ವಲ್ಪ ಕಡಿಮೆಯಾಗಿದ್ದ ವರ್ಷಧಾರೆ, ಬೆಳಿಗ್ಗೆ ಪುನಃ ಜೋರಾಗಿದೆ.<br />ಶುಕ್ರವಾರ ಬೆಳಿಗ್ಗೆ 8ಕ್ಕೆ ಮುಕ್ತಾಯಗೊಂಡ 24 ತಾಸುಗಳ ಅವಧಿಯಲ್ಲಿ 23.5 ಸೆಂಟಿಮೀಟರ್ಗಳಷ್ಟು ಭಾರಿ ಮಳೆ ದಾಖಲಾಗಿದೆ. ಸ್ಥಳೀಯ ಹೊಳೆಗಳು ಉಕ್ಕಿ ಹರಿಯುತ್ತಿರುವ ಕಾರಣದಿಂದ ತಾಲ್ಲೂಕಿನ ಹೆಮ್ಮನಬೈಲ್ ಮತ್ತು ಕಲ್ಯಾಣ ಪುರದಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದೆ.</p>.<p>ದಾಂಡೇಲಿಯಲ್ಲೂ ಮಳೆ ಮುಂದುವರಿದಿದ್ದು, ವಿವಿಧ ರಸ್ತೆಗಳಲ್ಲಿ ಸಂಪರ್ಕ ಕಡಿತಗೊಂಡಿದೆ. ಇದರಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಗಳು ಡಿಪೊದಲ್ಲೇ ನಿಂತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>