ಮಲ್ಪೆಯ ದೋಣಿಯು ಮೀನುಗಾರಿಕೆಯಲ್ಲಿ ತೊಡಗಿದ್ದಾಗ ಸಮುದ್ರ ಮತ್ತಷ್ಟು ಪ್ರಕ್ಷುಬ್ಧವಾಯಿತು. ಹಾಗಾಗಿ ಕಾರವಾರದ ಬೈತಖೋಲ್ ಮೀನುಗಾರಿಕಾ ಬಂದರಿನ ಬಳಿ ಲಂಗರು ಹಾಕಲಾಗಿತ್ತು. ಗಾಳಿಯ ರಭಸಕ್ಕೆ ಲಂಗರು ಕಡಿದು ದಡಕ್ಕೆ ಅಪ್ಪಳಿಸಿದೆ. ಅದೃಷ್ಟವಶಾತ್ ದೊಡ್ಡ ಮಟ್ಟದ ಹಾನಿಯಾಗಿಲ್ಲ. ಪಾತಿ ದೋಣಿಯು ದಡ ಮೇಲೆ ಬಂದು ಬಿದ್ದಿದ್ದು, ಸ್ವಲ್ಪ ಹಾನಿಯಾಗಿದೆ ಎಂದು ಮೀನುಗಾರರು ತಿಳಿಸಿದ್ದಾರೆ.