ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರ್ಸಂಟೇಜ್‌ಗೆ ಜನ್ಮ ನೀಡಿದ್ದು ಕಾಂಗ್ರೆಸ್: ಸಚಿವ ಶ್ರೀರಾಮುಲು ವಾಗ್ದಾಳಿ

Last Updated 4 ಮೇ 2022, 10:45 IST
ಅಕ್ಷರ ಗಾತ್ರ

ಶಿರಸಿ: ಅರವತ್ತು ವರ್ಷ ಅಧಿಕಾರದಲ್ಲಿದ್ದು ಭ್ರಷ್ಟಾಚಾರ ಪರಿಚಯಿಸಿದ್ದು ಕಾಂಗ್ರೆಸ್ ಪಕ್ಷ. ಅವರೇ ಪರ್ಸಂಟೇಜ್ ವ್ಯವಹಾರಕ್ಕೆ ಜನ್ಮ ನೀಡಿದವರು ಎಂದು ಸಾರಿಗೆ ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದರು.

ಬುಧವಾರ ಶಿರಸಿಯಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, 'ಪಿಎಸ್ಐ ನೇಮಕಾತಿ ಸೇರಿದಂತೆ ವಿವಿಧ ಹುದ್ದೆ ನೇಮಕಾತಿ ಹಗರಣವನ್ನು ನಾವೇ ಪತ್ತೆ ಹಚ್ಚಿದ್ದೇವೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ' ಎಂದರು.

'ಸಚಿವ ಅಶ್ವತ್ಥ ನಾರಾಯಣ ಅವರ ಮೇಲೆ ಕಾಂಗ್ರೆಸ್ ನಾಯಕ ಡಿ.ಕೆ‌.ಶಿವಕುಮಾರ್ ನಿರಾಧಾರ ಆರೋಪ ಹೊರಿಸುತ್ತಿದ್ದಾರೆ. ಭ್ರಷ್ಟಾಚಾರದಲ್ಲಿ ಮುಳುಗಿದ್ದ ಕಾಂಗ್ರೆಸ್ ನಾಯಕರು ತಾವು ಮಾಡಿದ ತಪ್ಪನ್ನು ಬಿಜೆಪಿ ನಾಯಕರ ಮೇಲೆ ಹೊರಿಸುವ ಕೆಲಸ ಮಾಡುತ್ತಿದ್ದಾರೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT