ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ಕಳೆದ ಲೋಕಸಭಾ ಚುನಾವಣೆಯೇ ತಮ್ಮ ಕೊನೆಯ ಚುನಾವಣೆ ಎಂದು ಅವರು ಅಂದು ಹೇಳಿದ್ದರು. ಅದಾದ ನಂತರ ನಾನೊಮ್ಮೆ ಅವರನ್ನು ಭೇಟಿಯಾಗಿದ್ದೆ. ಆಗಲೂ ಇದೇ ಮಾತನ್ನು ಪುನರುಚ್ಛರಿಸಿದ್ದರು. ಹೀಗಾಗಿ, ಆ ಸಂದರ್ಭದಲ್ಲಿ ನಾನು ಲೋಕಸಭೆಗೆ ಸ್ಪರ್ಧಿಸುವ ಇಚ್ಛೆಯನ್ನು ಅವರ ಬಳಿ ವ್ಯಕ್ತಪಡಿಸಿದ್ದೆ. ಅವರ ಬೆಂಬಲ ಸಿಕ್ಕರೆ ಸ್ಪರ್ಧಿಸುತ್ತೇನೆ’ ಎಂದು ಹೇಳಿದರು.