ಸ್ಯಾಟಲೈಟ್ ಕರೆಯೊಂದನ್ನು ಆಧರಿಸಿ ಭಾನುವಾರ ಬೆಳಿಗ್ಗೆ ಹುಡುಕಾಟಕ್ಕೆ ತೆರಳಿದ್ದ ಮಾರಿಹಾಳ ಅವರ ತಂಡ, ಕೈಗಾದ ಬಾರೆ ರಸ್ತೆಯ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆಯಲ್ಲಿ ನಿರತವಾಗಿತ್ತು. ಈ ವೇಳೆ ಆಕಸ್ಮಿಕವಾಗಿ ಮಾರಿಹಾಳ ಹಾಗೂ ರವಿಚಂದ್ರ ಅವರು ದಾರಿತಪ್ಪಿದ್ದರು. ಇದರಿಂದಾಗಿ ಅರಣ್ಯ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ತಂಡ ರಚಿಸಿಕೊಂಡು ಹುಡುಕಾಟ ಶುರು ಮಾಡಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್ ದೇವರಾಜು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ್ ಕೂಡ ಕದ್ರಾ ಭಾಗಕ್ಕೆ ಭೇಟಿ ನೀಡಿ, ರಾತ್ರಿ ಮೊಕ್ಕಾಂ ಹೂಡಿದ್ದರು.