<p><strong>ಕಾರವಾರ:</strong>ನಗರದಿಂದ ಸಿಗಂದೂರಿಗೆ ಪ್ರಯಾಣಿಸುವ ನೂತನ ಬಸ್ಗೆ ಶಾಸಕಿ ರೂಪಾಲಿ ನಾಯ್ಕ ಶುಕ್ರವಾರ ಚಾಲನೆ ನೀಡಿದರು. ಇದೇವೇಳೆ, ಹೈದರಾಬಾದ್ಮಾರ್ಗದ ಹಳೆಯ ಬಸ್ ಬದಲುಹೊಸ ಬಸ್ ಸಂಚಾರವನ್ನು ಉದ್ಘಾಟಿಸಿದರು.</p>.<p>‘ಸಿಗಂದೂರುದೇವಿಯ ದರ್ಶನಕ್ಕೆಕಾರವಾರದಿಂದ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಿದೆ.ಆದರೆ, ಸೂಕ್ತವಾದಬಸ್ ಸೌಲಭ್ಯ ಇರಲಿಲ್ಲ. ಜನರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿಈ ಸೌಕರ್ಯ ಕಲ್ಪಿಸಲಾಗಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದು ಕೊಳ್ಳಬೇಕು’ ಎಂದು ಅವರು ತಿಳಿಸಿದರು.</p>.<p>ಕಾರವಾರದಿಂದ ಬೆಳಿಗ್ಗೆ 7.30ಕ್ಕೆ ಹೊರಡುವ ಬಸ್ಸಿಗಂದೂರಿಗೆ 12.30ಕ್ಕೆ ತಲುಪಲಿದೆ. ಮಧ್ಯಾಹ್ನ 2.30ಕ್ಕೆ ಅಲ್ಲಿಂದ ಹೊರಟು ಸಂಜೆ 7.30ಕ್ಕೆ ಇಲ್ಲಿಗೆ ಬಂದು ತಲುಪಲಿದೆ.ಹೈದರಾಬಾದ್ ಮಾರ್ಗಕ್ಕೆ ಹೊಸ ಬಸ್ ನೀಡಲಾಗಿದ್ದು ಕಾರವಾರದಿಂದ ಮಧ್ಯಾಹ್ನ 3 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 9.30ಕ್ಕೆ ತಲುಪಲಿದೆ. ರಾತ್ರಿ 9 ಗಂಟೆಗೆ ಅಲ್ಲಿಂದ ತೆರಳಿ ಮರುದಿನ ಮಧ್ಯಾಹ್ನ 1ಕ್ಕೆ ಕಾರವಾರ ತಲುಪಲಿದೆ.</p>.<p>ಈ ಸಂದರ್ಭದಲ್ಲಿ ಕಾರವಾರ ಬಸ್ ಡಿಪೊವ್ಯವಸ್ಥಾಪಕ ತುಷಾರ್, ನಿಲ್ದಾಣದ ನಿಯಂತ್ರಕರು, ಸಾರಿಗೆ ಸಿಬ್ಬಂದಿ, ನಗರಸಭೆಯ ಸದಸ್ಯರು, ಸಾರ್ವಜನಿಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong>ನಗರದಿಂದ ಸಿಗಂದೂರಿಗೆ ಪ್ರಯಾಣಿಸುವ ನೂತನ ಬಸ್ಗೆ ಶಾಸಕಿ ರೂಪಾಲಿ ನಾಯ್ಕ ಶುಕ್ರವಾರ ಚಾಲನೆ ನೀಡಿದರು. ಇದೇವೇಳೆ, ಹೈದರಾಬಾದ್ಮಾರ್ಗದ ಹಳೆಯ ಬಸ್ ಬದಲುಹೊಸ ಬಸ್ ಸಂಚಾರವನ್ನು ಉದ್ಘಾಟಿಸಿದರು.</p>.<p>‘ಸಿಗಂದೂರುದೇವಿಯ ದರ್ಶನಕ್ಕೆಕಾರವಾರದಿಂದ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಿದೆ.ಆದರೆ, ಸೂಕ್ತವಾದಬಸ್ ಸೌಲಭ್ಯ ಇರಲಿಲ್ಲ. ಜನರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿಈ ಸೌಕರ್ಯ ಕಲ್ಪಿಸಲಾಗಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದು ಕೊಳ್ಳಬೇಕು’ ಎಂದು ಅವರು ತಿಳಿಸಿದರು.</p>.<p>ಕಾರವಾರದಿಂದ ಬೆಳಿಗ್ಗೆ 7.30ಕ್ಕೆ ಹೊರಡುವ ಬಸ್ಸಿಗಂದೂರಿಗೆ 12.30ಕ್ಕೆ ತಲುಪಲಿದೆ. ಮಧ್ಯಾಹ್ನ 2.30ಕ್ಕೆ ಅಲ್ಲಿಂದ ಹೊರಟು ಸಂಜೆ 7.30ಕ್ಕೆ ಇಲ್ಲಿಗೆ ಬಂದು ತಲುಪಲಿದೆ.ಹೈದರಾಬಾದ್ ಮಾರ್ಗಕ್ಕೆ ಹೊಸ ಬಸ್ ನೀಡಲಾಗಿದ್ದು ಕಾರವಾರದಿಂದ ಮಧ್ಯಾಹ್ನ 3 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 9.30ಕ್ಕೆ ತಲುಪಲಿದೆ. ರಾತ್ರಿ 9 ಗಂಟೆಗೆ ಅಲ್ಲಿಂದ ತೆರಳಿ ಮರುದಿನ ಮಧ್ಯಾಹ್ನ 1ಕ್ಕೆ ಕಾರವಾರ ತಲುಪಲಿದೆ.</p>.<p>ಈ ಸಂದರ್ಭದಲ್ಲಿ ಕಾರವಾರ ಬಸ್ ಡಿಪೊವ್ಯವಸ್ಥಾಪಕ ತುಷಾರ್, ನಿಲ್ದಾಣದ ನಿಯಂತ್ರಕರು, ಸಾರಿಗೆ ಸಿಬ್ಬಂದಿ, ನಗರಸಭೆಯ ಸದಸ್ಯರು, ಸಾರ್ವಜನಿಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>