<p><strong>ಕಾರವಾರ:</strong> ಹೊನ್ನಾವರ ತಾಲ್ಲೂಕಿನ ಕಾಸರಕೋಡು ಕಡಲತೀರವು ಪ್ರತಿಷ್ಠಿತ ‘ಬ್ಲೂ ಫ್ಲ್ಯಾಗ್’ ಪ್ರಮಾಣಪತ್ರವನ್ನು ಈ ವರ್ಷವೂ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಅಂತರರಾಷ್ಟ್ರೀಯ ಮಟ್ಟದಲ್ಲಿ ಮತ್ತೊಮ್ಮೆ ಗಮನ ಸೆಳೆದಿದೆ.</p>.<p>ಈ ಕಡಲತೀರವು‘ಬ್ಲೂ ಫ್ಲ್ಯಾಗ್’ ಗರಿಮೆಯೊಂದಿಗೆ 2020ರ ಡಿ.28ರಂದು ಉದ್ಘಾಟನೆಯಾಗಿತ್ತು. ಬಳಿಕ ಪ್ರತಿನಿತ್ಯವೂ ಸಾವಿರಾರು ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಿದ್ದರು. ಈ ವರ್ಷ ಮೇ ತಿಂಗಳಲ್ಲಿ ಬೀಸಿದ್ದ ‘ತೌತೆ’ ಚಂಡಮಾರುತದಿಂದ ಕಡಲ ಕಿನಾರೆಗೆ ಸ್ವಲ್ಪ ಮಟ್ಟಿನ ಹಾನಿಯಾಗಿತ್ತು. ಅದನ್ನು ಜಿಲ್ಲಾಡಳಿತವು ದುರಸ್ತಿ ಮಾಡಿ, ಗುಣಮಟ್ಟ ಕಾಯ್ದುಕೊಂಡಿತ್ತು.</p>.<p>ಕಡಲಕಿನಾರೆಯ ನಿರ್ವಹಣೆಯನ್ನು ಪರಿಶೀಲಿಸಿದಅಂತರರಾಷ್ಟ್ರೀಯ ಸಮಿತಿಯು, ಪ್ರಮಾಣಪತ್ರ ಮಂಜೂರು ಮಾಡಿದೆ. ಇದೇರೀತಿ, ಉಡುಪಿ ಜಿಲ್ಲೆಯ ಪಡುಬಿದ್ರಿಯ ಕಡಲತೀರಕ್ಕೂ ‘ಬ್ಲೂ ಫ್ಲ್ಯಾಗ್’ ಮನ್ನಣೆ ಮುಂದುವರಿದಿದೆ. ಈ ಬಗ್ಗೆ ಕೇಂದ್ರ ಪರಿಸರ ಖಾತೆ ಸಚಿವ ಭೂಪೇಂದರ್ ಯಾದವ್ ಟ್ವೀಟ್ ಮಾಡಿದ್ದಾರೆ.</p>.<p>ಡೆನ್ಮಾರ್ಕ್ನ ಕೋಪನ್ ಹೆಗನ್ನಲ್ಲಿರುವ ‘ಪರಿಸರ ಶಿಕ್ಷಣಕ್ಕಾಗಿ ವೇದಿಕೆ’ಯು (ಎಫ್.ಇ.ಇ) ಜಾಗತಿಕ ಮಟ್ಟದಲ್ಲಿ ಕಡಲತೀರಗಳನ್ನು ಗುರುತಿಸಲು ‘ಬ್ಲೂ ಫ್ಲ್ಯಾಗ್’ ಮನ್ನಣೆ ನೀಡುತ್ತದೆ. ಇದಕ್ಕಾಗಿ ಕಡಲತೀರದ ಸ್ವಚ್ಛತೆ, ನೀರಿನ ಗುಣಮಟ್ಟ, ಪರಿಸರಸ್ನೇಹಿ ನಿರ್ಮಾಣಗಳು ಸೇರಿದಂತೆ 33 ಷರತ್ತುಗಳನ್ನು ಚಾಚೂ ತಪ್ಪದೇ ಪಾಲಿಸಬೇಕಾಗುತ್ತದೆ.</p>.<p>ಕೇಂದ್ರ ಸರ್ಕಾರವು ರಾಜ್ಯದ ಕಾಸರಕೋಡು, ಪಡುಬಿದ್ರಿ, ಗುಜರಾತ್ನ ಶಿವರಾಜಪುರ, ಡಿಯುನ ಘೋಗ್ಲಾ, ಕೇರಳದ ಕಪ್ಪಾಡ್, ಆಂಧ್ರಪ್ರದೇಶದ ಋಷಿಕೊಂಡ, ಒಡಿಶಾದ ಗೋಲ್ಡನ್ ಮತ್ತು ಅಂಡಮಾನ್ ದ್ವೀಪದ ರಾಧಾನಗರ ಕಡಲತೀರಗಳು ಕಳೆದ ವರ್ಷ ಪ್ರಮಾಣ ಪತ್ರ ಪಡೆದಿದ್ದವು. ಈ ವರ್ಷ ತಮಿಳುನಾಡಿನ ಕೋವಲಂ ಹಾಗೂ ಪುದುಚೇರಿಯ ಈಡನ್ ಕಡಲತೀರಗಳಲ್ಲೂ ‘ಬ್ಲೂ ಫ್ಲ್ಯಾಗ್’ ಅನಾವರಣಗೊಂಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ಹೊನ್ನಾವರ ತಾಲ್ಲೂಕಿನ ಕಾಸರಕೋಡು ಕಡಲತೀರವು ಪ್ರತಿಷ್ಠಿತ ‘ಬ್ಲೂ ಫ್ಲ್ಯಾಗ್’ ಪ್ರಮಾಣಪತ್ರವನ್ನು ಈ ವರ್ಷವೂ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಅಂತರರಾಷ್ಟ್ರೀಯ ಮಟ್ಟದಲ್ಲಿ ಮತ್ತೊಮ್ಮೆ ಗಮನ ಸೆಳೆದಿದೆ.</p>.<p>ಈ ಕಡಲತೀರವು‘ಬ್ಲೂ ಫ್ಲ್ಯಾಗ್’ ಗರಿಮೆಯೊಂದಿಗೆ 2020ರ ಡಿ.28ರಂದು ಉದ್ಘಾಟನೆಯಾಗಿತ್ತು. ಬಳಿಕ ಪ್ರತಿನಿತ್ಯವೂ ಸಾವಿರಾರು ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಿದ್ದರು. ಈ ವರ್ಷ ಮೇ ತಿಂಗಳಲ್ಲಿ ಬೀಸಿದ್ದ ‘ತೌತೆ’ ಚಂಡಮಾರುತದಿಂದ ಕಡಲ ಕಿನಾರೆಗೆ ಸ್ವಲ್ಪ ಮಟ್ಟಿನ ಹಾನಿಯಾಗಿತ್ತು. ಅದನ್ನು ಜಿಲ್ಲಾಡಳಿತವು ದುರಸ್ತಿ ಮಾಡಿ, ಗುಣಮಟ್ಟ ಕಾಯ್ದುಕೊಂಡಿತ್ತು.</p>.<p>ಕಡಲಕಿನಾರೆಯ ನಿರ್ವಹಣೆಯನ್ನು ಪರಿಶೀಲಿಸಿದಅಂತರರಾಷ್ಟ್ರೀಯ ಸಮಿತಿಯು, ಪ್ರಮಾಣಪತ್ರ ಮಂಜೂರು ಮಾಡಿದೆ. ಇದೇರೀತಿ, ಉಡುಪಿ ಜಿಲ್ಲೆಯ ಪಡುಬಿದ್ರಿಯ ಕಡಲತೀರಕ್ಕೂ ‘ಬ್ಲೂ ಫ್ಲ್ಯಾಗ್’ ಮನ್ನಣೆ ಮುಂದುವರಿದಿದೆ. ಈ ಬಗ್ಗೆ ಕೇಂದ್ರ ಪರಿಸರ ಖಾತೆ ಸಚಿವ ಭೂಪೇಂದರ್ ಯಾದವ್ ಟ್ವೀಟ್ ಮಾಡಿದ್ದಾರೆ.</p>.<p>ಡೆನ್ಮಾರ್ಕ್ನ ಕೋಪನ್ ಹೆಗನ್ನಲ್ಲಿರುವ ‘ಪರಿಸರ ಶಿಕ್ಷಣಕ್ಕಾಗಿ ವೇದಿಕೆ’ಯು (ಎಫ್.ಇ.ಇ) ಜಾಗತಿಕ ಮಟ್ಟದಲ್ಲಿ ಕಡಲತೀರಗಳನ್ನು ಗುರುತಿಸಲು ‘ಬ್ಲೂ ಫ್ಲ್ಯಾಗ್’ ಮನ್ನಣೆ ನೀಡುತ್ತದೆ. ಇದಕ್ಕಾಗಿ ಕಡಲತೀರದ ಸ್ವಚ್ಛತೆ, ನೀರಿನ ಗುಣಮಟ್ಟ, ಪರಿಸರಸ್ನೇಹಿ ನಿರ್ಮಾಣಗಳು ಸೇರಿದಂತೆ 33 ಷರತ್ತುಗಳನ್ನು ಚಾಚೂ ತಪ್ಪದೇ ಪಾಲಿಸಬೇಕಾಗುತ್ತದೆ.</p>.<p>ಕೇಂದ್ರ ಸರ್ಕಾರವು ರಾಜ್ಯದ ಕಾಸರಕೋಡು, ಪಡುಬಿದ್ರಿ, ಗುಜರಾತ್ನ ಶಿವರಾಜಪುರ, ಡಿಯುನ ಘೋಗ್ಲಾ, ಕೇರಳದ ಕಪ್ಪಾಡ್, ಆಂಧ್ರಪ್ರದೇಶದ ಋಷಿಕೊಂಡ, ಒಡಿಶಾದ ಗೋಲ್ಡನ್ ಮತ್ತು ಅಂಡಮಾನ್ ದ್ವೀಪದ ರಾಧಾನಗರ ಕಡಲತೀರಗಳು ಕಳೆದ ವರ್ಷ ಪ್ರಮಾಣ ಪತ್ರ ಪಡೆದಿದ್ದವು. ಈ ವರ್ಷ ತಮಿಳುನಾಡಿನ ಕೋವಲಂ ಹಾಗೂ ಪುದುಚೇರಿಯ ಈಡನ್ ಕಡಲತೀರಗಳಲ್ಲೂ ‘ಬ್ಲೂ ಫ್ಲ್ಯಾಗ್’ ಅನಾವರಣಗೊಂಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>