ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರವಾರ: ಹೆಬ್ಬಾವನ್ನು ನುಂಗಲು ಕಾಳಿಂಗ ಸರ್ಪ ಯತ್ನ!

Last Updated 20 ಆಗಸ್ಟ್ 2021, 14:12 IST
ಅಕ್ಷರ ಗಾತ್ರ

ಕಾರವಾರ: ನಗರದ ಹರಿದೇವ ನಗರದಲ್ಲಿ ಶುಕ್ರವಾರ ಕಾಳಿಂಗ ಸರ್ಪವೊಂದು ಹೆಬ್ಬಾವನ್ನು ನುಂಗಲು ಯತ್ನಿಸಿದೆ. ಸುಮಾರು ಅರ್ಧ ಗಂಟೆ ಎರಡೂ ಕಾದಾಡಿದ್ದು, ಸ್ಥಳೀಯರು ಆತಂಕಗೊಂಡಿದ್ದರು.

ಕಾಳಿಂಗ ಸರ್ಪವು ಬುಸುಗುಟ್ಟುವ ಸದ್ದಿನಿಂದ ಬೆದರಿದ ಸ್ಥಳೀಯರು, ಅರಣ್ಯ ಇಲಾಖೆ ಸಿಬ್ಬಂದಿಗೆ ವಿಷಯ ತಿಳಿಸಿದರು. ಸ್ಥಳಕ್ಕೆ ಬಂದ ಸಿಬ್ಬಂದಿ, ಎರಡೂ ಹಾವುಗಳನ್ನು ಬೇರ್ಪಡಿಸಲು ಪ್ರಯತ್ನಿಸಿದರು. ಅಷ್ಟರಲ್ಲಿ ಕಾಳಿಂಗ ಸರ್ಪವು ಪೊದೆಗಳ ಮಧ್ಯೆ ಸಾಗಿ ಮರೆಯಾಯಿತು. ಗಾಯಗೊಂಡ ಹೆಬ್ಬಾವನ್ನು ಅರಣ್ಯ ಇಲಾಖೆಯ ಬೀಟ್ ಸಿಬ್ಬಂದಿ ಗೋಪಾಲ ನಾಯ್ಕ ರಕ್ಷಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT