ಮನೆಯಂಗಳದಲ್ಲಿ ನಿಂತಿರುವವರು, ಮಗು, ದಾರಿಯಲ್ಲಿ ಹೋಗುತ್ತಿರುವವರು.. ಹೀಗೆ ತನ್ನ ಕಣ್ಣಿಗೆ ಕಂಡವರ ಮೇಲೆ ದಾಳಿ ಮಾಡುತ್ತಿದೆ. ಕೆಲವು ದಿನಗಳ ಹಿಂದೆ ಕಾಣಿಸಿಕೊಂಡಾಗ ಗ್ರಾಮಸ್ಥರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಕಾಡಿಗೆ ಓಡಿಸಿದ್ದರು. ಭಾನುವಾರ ಮತ್ತೆ ಗುಂಪಿನೊಂದಿಗೆ ಗ್ರಾಮದಲ್ಲಿ ಕಾಣಿಸಿಕೊಂಡಿದ್ದು, ಬೆಳಿಗ್ಗೆ ಅಂಗವಿಕಲರೊಬ್ಬರ ಕಾಲಿಗೆ ಬಲವಾಗಿ ಕಚ್ಚಿ ಗಾಯಗೊಳಿಸಿದೆ. ಅವರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.