<p><strong>ಶಿರಸಿ:</strong> ಇಲ್ಲಿನ ಅಜಿತ ಮನೋಚೇತನಾ ಕೇಂದ್ರದ ವಿಕಾಸ ಶಾಲೆಯ ಬುದ್ಧಿಮಾಂದ್ಯ ಮಕ್ಕಳಿಗೆ ಅನುಕೂಲವಾಗುವಂತೆ ಅವರ ಪಾಲಕರಿಗೆ ದಿನಸಿ ಕಿಟ್ ಹಾಗೂ ವೈದ್ಯರ ಸಲಹೆ ಮೇರೆಗೆ ಮಕ್ಕಳಿಗೆ ಔಷಧ ಕಿಟ್ಗಳನ್ನು ಶುಕ್ರವಾರ ಇಲ್ಲಿ ವಿತರಿಸಲಾಯಿತು. ಸುಮಾರು 24 ಪಾಲಕರು ಒಟ್ಟು ₹ 50ಸಾವಿರ ಮೌಲ್ಯದ ಕಿಟ್ಗಳನ್ನು ಪಡೆದರು.</p>.<p>ಸಿರಿಧಾನ್ಯ ಸೇರಿದಂತೆ ಮಕ್ಕಳ ಬೆಳವಣಿಗೆಗೆ ಪೂರಕವಾದ ಶಕ್ತಿವರ್ಧಕ ಆಹಾರ ಸಾಮಗ್ರಿಗಳಿರುವ ಕಿಟ್ ಅನ್ನು ಅಜಿತ ಮನೋಚೇತನಾ ಸಂಸ್ಥೆಯ ಪದಾಧಿಕಾರಿಗಳು ಪಾಲಕರಿಗೆ ವಿತರಿಸಿದರು. ಕರ್ನಾಟಕ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಅಶೀಸರ ಅವರು, ಉತ್ತರ ಕನ್ನಡ ಜಿಲ್ಲೆ ಕೊರೊನಾದಿಂದ ಮುಕವಾಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ಇದಕ್ಕಾಗಿ ಶ್ರಮಿಸಿದ ಎಲ್ಲ ಅಧಿಕಾರಿಗಳು, ಸಿಬ್ಬಂದಿಗೆ, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರೂ ಎದ್ದುನಿಂತು ಅಭಿನಂದನೆ ಸಲ್ಲಿಸಿದರು. ಸಂಸ್ಥೆಯ ಅಧ್ಯಕ್ಷ ಸುಧೀರ ಭಟ್ ಸ್ವಾಗತಿಸಿದರು. ಮುಖ್ಯ ಶಿಕ್ಷಕಿ ನರ್ಮದಾ ಹೆಗಡೆ ವಂದಿಸಿದರು. ನಿವೃತ್ತ ಅಧಿಕಾರಿ ಆರ್.ಎ.ಖಾಜಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ಇಲ್ಲಿನ ಅಜಿತ ಮನೋಚೇತನಾ ಕೇಂದ್ರದ ವಿಕಾಸ ಶಾಲೆಯ ಬುದ್ಧಿಮಾಂದ್ಯ ಮಕ್ಕಳಿಗೆ ಅನುಕೂಲವಾಗುವಂತೆ ಅವರ ಪಾಲಕರಿಗೆ ದಿನಸಿ ಕಿಟ್ ಹಾಗೂ ವೈದ್ಯರ ಸಲಹೆ ಮೇರೆಗೆ ಮಕ್ಕಳಿಗೆ ಔಷಧ ಕಿಟ್ಗಳನ್ನು ಶುಕ್ರವಾರ ಇಲ್ಲಿ ವಿತರಿಸಲಾಯಿತು. ಸುಮಾರು 24 ಪಾಲಕರು ಒಟ್ಟು ₹ 50ಸಾವಿರ ಮೌಲ್ಯದ ಕಿಟ್ಗಳನ್ನು ಪಡೆದರು.</p>.<p>ಸಿರಿಧಾನ್ಯ ಸೇರಿದಂತೆ ಮಕ್ಕಳ ಬೆಳವಣಿಗೆಗೆ ಪೂರಕವಾದ ಶಕ್ತಿವರ್ಧಕ ಆಹಾರ ಸಾಮಗ್ರಿಗಳಿರುವ ಕಿಟ್ ಅನ್ನು ಅಜಿತ ಮನೋಚೇತನಾ ಸಂಸ್ಥೆಯ ಪದಾಧಿಕಾರಿಗಳು ಪಾಲಕರಿಗೆ ವಿತರಿಸಿದರು. ಕರ್ನಾಟಕ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಅಶೀಸರ ಅವರು, ಉತ್ತರ ಕನ್ನಡ ಜಿಲ್ಲೆ ಕೊರೊನಾದಿಂದ ಮುಕವಾಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ಇದಕ್ಕಾಗಿ ಶ್ರಮಿಸಿದ ಎಲ್ಲ ಅಧಿಕಾರಿಗಳು, ಸಿಬ್ಬಂದಿಗೆ, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರೂ ಎದ್ದುನಿಂತು ಅಭಿನಂದನೆ ಸಲ್ಲಿಸಿದರು. ಸಂಸ್ಥೆಯ ಅಧ್ಯಕ್ಷ ಸುಧೀರ ಭಟ್ ಸ್ವಾಗತಿಸಿದರು. ಮುಖ್ಯ ಶಿಕ್ಷಕಿ ನರ್ಮದಾ ಹೆಗಡೆ ವಂದಿಸಿದರು. ನಿವೃತ್ತ ಅಧಿಕಾರಿ ಆರ್.ಎ.ಖಾಜಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>